ಪೋಸ್ಟ್‌ಗಳು

ಸೆಪ್ಟೆಂಬರ್, 2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅಡುಗೆ ಸಂಭ್ರಮ

ಇಮೇಜ್
ನಾನು ನಮ್ಮ ಮನೆಯಲ್ಲಿನ ಮುದ್ದಿನ ತನುಜೆ, ಅಕ್ಕನ ಅನುಜೆ. ಚಿಕ್ಕಂದಿನಲ್ಲಿ ಅಮ್ಮ ಎಲ್ಲಾದರೂ ಹೊರಗಡೆ ಹೋದರೆ ಅಪ್ಪಾಜಿಯ ನಳಪಾಕ, ಅಪ್ಪಾಜಿಯೂ ಇಲ್ಲದಿದ್ದ ಪಕ್ಷದಲ್ಲಿ ಅಕ್ಕನ ಅಡುಗೆ ಪ್ರಯೋಗಗಳಿಂದ ನನ್ನ ಹೊಟ್ಟೆ ತುಂಬಿಸಿಕೊಳ್ಳಲು ಯಾವ ಕೊರತೆಯೂ ಆಗುತ್ತಿರಲಿಲ್ಲ. ಇದೆ ಕಾರಣಕ್ಕೋ ಏನೋ ಸುಮಾರು ೭-೮ ನೇ ತರಗತಿಗೆ ಬರುವ ವರೆಗೂ ಅಡುಗೆ ತಯಾರಿಸಲು ಸಹಾಯ ಮಾಡುವ ಕೆಲಸ ಮಾಡಿದ್ದಿದ್ದರೂ, ನಾನಾಗಿಯೇ ಯಾವುದೇ ಮುಖ್ಯ ಅಡುಗೆ ತಯಾರಿಸುವ ಗೋಜಿಗೆ ಹೋಗಿಯೇ ಇರಲಿಲ್ಲ. ಹಾಗೊಂದು ದಿನ ಅಪ್ಪಾಜಿ ಅಮ್ಮ ಕಡೆಗೆ ಅಕ್ಕನೂ ಮನೆಯಲ್ಲಿರದ ದಿನ. ಅಂದು ಗೆಳತಿಯೊಬ್ಬಳನ್ನು ಮನೆಗೆ ಕರೆತಂದಿದ್ದೆ. ಮನೆಯಲ್ಲಿ ಅಮ್ಮ ಅಡುಗೆ ತಯಾರಿಸಿಟ್ಟಿದ್ದರೆಂಬ ನೆನಪು. ಯಾವುದೋ ಮಾತಿನ ಮಧ್ಯೆ ಗೆಳತಿಯು ತನಗೆ ಅಲ್ಪಸ್ವಲ್ಪ ಪದಾರ್ಥಗಳನ್ನು ಮಾಡಲು ಬರುತ್ತದೆ ಎಂದು ತನ್ನ ಬಗ್ಗೆ ಹೇಳಿಕೊಂಡಾಗ, ನನ್ನ ಬಗ್ಗೆ ನನಗೆ ಸಂಕೋಚವೆನಿಸಿತು. ನಂತರಕ್ಕೆ, ಅದೆಲ್ಲಿಂದ ಬಂದ ಶೂರತನವೋ ತಿಳಿಯದು, "ನೀನು ನನಗೆ ಗೈಡ್ ಮಾಡು , ನಾನು ಪದಾರ್ಥ ತಯಾರು ಮಾಡುತ್ತೇನೆ" ಎಂದು ಅವಳಲ್ಲಿ ಕೇಳಿಕೊಂಡು, ಬದನೆ ಮತ್ತು ಬೆಳ್ಳುಳ್ಳಿ ಹಾಕಿ ಕಾಯಿ ಗೊಜ್ಜು ಮಾಡುವ ಪ್ಲಾನ್ ಮಾಡಿದೆವು. ತೆಂಗಿನ ತುರಿ ಸಿದ್ಧವಾಯಿತು. ಬದನೇಕಾಯಿ ಪಾತ್ರೆಯಲ್ಲಿಟ್ಟು ಬೇಯಿಸಿಕೊಂಡಿದ್ದಾಯಿತು. ಬೆಳ್ಳುಳ್ಳಿ ತಂದು ಬಿಡಿಸಿಕೊಂಡಿದ್ದಾಯಿತು. ಏನೂ ಅಡುಗೆ ಬಾರದ ನಾನು, ಚಿಟಿಕೆ ಉಪ್ಪಿಗೂ  ಗೆಳತಿಯ ಸೂಚನೆಗಳನ್ನು ತೆಗೆದ...

ಕೃಷ್ಣನ ಅವಲಕ್ಕಿ

ಇಮೇಜ್
ಆಗ ನಂಗೆ ಎಷ್ಟು ವರ್ಷ ಎಂದು ಸರಿ ನೆನಪಿಲ್ಲ. ಒಟ್ನಲ್ಲಿ ಸಣ್ಣಕ್ಕಿದ್ದೆ. ನಾವು ಮೊಮ್ಮಕ್ಕಳೆಲ್ಲ ಅಜ್ಜನ ಕೋಣೆಯಲ್ಲಿ ಸರಿದುಕೊಂಡು ಅಜ್ಜನ ಬಳಿ ಕೇಳಿ, ಪೌರಾಣಿಕ ಕಥೆ ಹೇಳಿಸಿಕೊಳ್ಳುವುದು ರೂಢಿಯಿತ್ತು. ಹಾಗೊಂದು ಸಾರಿ ಅಜ್ಜ ಕೃಷ್ಣ-ಸುಧಾಮರ ಗಾಢವಾದ ಗೆಳೆತನ, ಪ್ರೀತಿ, ಕೃಷ್ಣನ ಅವಲಕ್ಕಿಯ ಆಸೆ ಎಲ್ಲದರ ಕುರಿತು ಕಥೆಯನ್ನು ಹೇಳಿದ್ದ. ಕಥೆ ಕೇಳಿ ಸಾಕಷ್ಟು ದಿನಗಳು ಕಳೆದಿದ್ದರೂ, ಕೃಷ್ಣ ಹೇಗೆ ಸಣ್ಣ ಮಕ್ಕಳಂತೆ ಸುಧಾಮನ ಹೆಗಲಿನಿಂದ ಅವಲಕ್ಕಿ ಗಂಟನ್ನು ಅತ್ಯಂತ ಸಲಿಗೆಯಿಂದ ಕಸಿದುಕೊಂಡು ತೆಗೆದು ತಿಂದು ಖುಷಿ ಪಟ್ಟಿದ್ದ ಎಂಬ ಕಥೆಯ ಕಲ್ಪನಾ ಚಿತ್ರಣ ಮನಸ್ಸಿನಲ್ಲಿ ಮತ್ತೆ ಮತ್ತೆ ಮೂಡುತ್ತಿತ್ತು. ಒಂದು ದಿನ ಅದೇನು ಭಯಂಕರ ಆಲೋಚನೆ ಬಂದಿತೋ ಏನೋ, ಮಧ್ಯಾಹ್ನ ಅಮ್ಮುಮ್ಮ ಎಲ್ಲರೂ ಮಲಗಿದ್ದ ಸಮಯಕ್ಕೆ, ಎದ್ದು ಹೋಗಿ ಕಪಾಟಿನಲ್ಲಿ ಅವಲಕ್ಕಿಗಾಗಿ ಹುಡುಕಾಟ ನಡೆಸಿದೆ. ಕಡೆಗೆ ಮೇಲ್ಮೆತ್ತಿನ 'ಹೊಗೆ ಅಟ್ಟ' ದಲ್ಲಿ ಹುಡುಕಾಟದ ಅವಿರತ ಪ್ರಯತ್ನಕ್ಕೆ 'ಅರಳುಕಾಳು ಡಬ್ಬ' ಕೈಗೆ ಸಿಕ್ಕಿತ್ತು. ಚೂರು ಶಬ್ದ ಮಾಡದೆ, ಅಷ್ಟೊತ್ತು ಹುಡುಕಿದ್ದ ಶ್ರಮಕ್ಕೆ "ಕೃಷ್ಣ ನಿಗೆ ಅರಳಕಾಳು ಕೂಡ ಇಷ್ಟವಾಗುತ್ತದೆ' ಎಂಬ ನಿರ್ಧಾರವನ್ನು ನಾನೇ ತೆಗೆದುಕೊಂಡು, ಒಂದು ಲೋಟಕ್ಕೆ ಸ್ವಲ್ಪ ಅರಳಕಾಳು ಹಾಕಿಕೊಂಡು ಜಗಲಿಗೆ ಹೋದೆ. ಹಿಂದೆಲ್ಲ ಮನೆಯ ಜಗಲಿಯ ಗೋಡೆಗೆ ಸಾಲಾಗಿ ದೇವರ ಫೋಟೋಗಳನ್ನು ನೇತು ಹಾಕಿರುತ್ತಿದ್ದರು. ಕೃಷ್ಣನ ದೇವರ ಪಟದ ಕೆಳಗೋ ...