ಪೋಸ್ಟ್‌ಗಳು

ಆಗಸ್ಟ್, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಟ್ರೆಕ್ ಟು ಘಾನ್ಗ್ಹರಿಯ

ಟ್ರೆಕಿಂಗ್ ಟೀಮಿನವರನ್ನು ಸೇರಿಕೊಂಡು ಹೃಷಿಕೇಶದಿಂದ ಹೊರಟು, ಜೋಷಿಮಠ ದೇವಪ್ರಾಯಗದ ಮೂಲಕ ಹಾದು, ಸುಧೀರ್ಘ ೧೨.೫ ತಾಸುಗಳ ಘಾಟಿ ರೋಡಿನ ಪ್ರಯಾಣ. ಬೆಂಗಳೂರಿನಿಂದ ಹೊರಡುವಾಗ ನೋಡಿಕೊಂಡ ವೆದರ್ ರಿಪೋರ್ಟ್ ಪ್ರಕಾರ ನಾವು ಟ್ರೆಕ್ ಹೋಗುವ ಸ್ಥಳದಲ್ಲಿ ಎಲ್ಲಾ ದಿನವೂ ಮಳೆ ಎಂದಿತ್ತು. ನಮ್ಮದು ಪೂರಾ ಮಾನ್ಸೂನ್ ಟ್ರೆಕ್ಕೇ ಆಗಲಿಕ್ಕಿದೆ ಎಂದು ಗಟ್ಟಿ ಮನಸ್ಸು ಮಾಡಿಯೇ ಹೊರಟಿದ್ದರಿಂದ, ಆಗಾಗ್ಗೆ ಹನಿಯುತ್ತಿದ್ದ ಜುಮುರು ಮಳೆ, ಒಮ್ಮೊಮ್ಮೆ ಕಗ್ಗತ್ತಲು ಅವರಿಸುವಂತಹ ಮೋಡ ಮತ್ತು ಕೆಲವೊಮ್ಮೆ ಶುಭ್ರ ಬಿಳಿ ಮಂಜಿನ ಮುಸುಕು ಹೀಗೆ ಕ್ಷಣ ಕ್ಷಣಕ್ಕೆ ಬದಲಾಗುತ್ತಿದ್ದ ವಾತಾವರಣ ಕಂಡರೂ ಆತಂಕವೆನಿಸಲಿಲ್ಲ. ಹಿಂದಿ ಸುಲಲಿತವಾದ್ದರಿಂದ ಮಾತುಕತೆಗೆನೂ ತೊಂದರೆಯಾಗಲಿಲ್ಲ. ವಾಹನ ಚಾಲಕ ಶೈಲೇಂದರ್, ಅಲ್ಲಿನ ಭೌಗೋಳಿಕತೆ, ಜನಜೀವನ ಇತ್ಯಾದಿ ಕುರಿತಾಗಿ ಹೊಸ ವಿಷಯಗಳನ್ನು ತಿಳಿಸುತ್ತ, ನಮ್ಮೆಲ್ಲ ಪ್ರಶ್ನೆಗಳಿಗೆ, ಕುತೂಹಲಕ್ಕೆ ಉತ್ಸುಕತೆಯಿಂದಲೇ ಉತ್ತರಿಸುತ್ತ ಹೋಗುತ್ತಿದ್ದರು. ಗಾಡಿಯ ಕಿಟಕಿಯಾಚೆಗಿನ ಪ್ರತಿಯೊಂದು ವಿಹಂಗಮ ನೋಟವೂ ಒಂದೊಂದು ಕಥೆ ಸಾರುವಂತಿತ್ತು. ಮತ್ತವಷ್ಟೂ ಅಗಾಧ ಹಿಮಾಲಯದ ಒಂದು ಸಣ್ಣ ಭಾಗವಷ್ಟೇ ಎಂಬುದು ನಮ್ಮನ್ನು ಮತ್ತಷ್ಟು ಬೆರಗಾಗುವಂತೆ ಮಾಡುತ್ತಿತ್ತು. ದಿನದ ಕೊನೆಯಲ್ಲಿ ತಲುಪಿದ್ದು ಪಾಂಡುಕೇಶ್ವರ ಎಂಬ ಊರಿಗೆ. ಟ್ರೆಕಿಂಗ್ ಗೈಡ್ಗಳು ತಮ್ಮ ಪರಿಚಯ, ಟ್ರೆಕಿಂಗ್ ಸಮಯದ ಅನುಕೂಲ/ಅನಾನುಕೂಲಗಳು, ಸೌಲಭ್ಯಗಳು, ಟ್ರೆಕಿಂಗ್ ನ ನಿಯಮಗ...

some-ಬಂಧಗಳು

ಇಮೇಜ್
 ಉತ್ತರಾಖಂಡದ ಕೆಲವು ಸ್ಥಳಗಳಿಗೆ ಟ್ರೆಕ್ಕಿಂಗ್ ಹೋಗಲು ಏಜೆನ್ಸಿ ಒಂದರಿಂದ ಬುಕ್ ಮಾಡಿಕೊಂಡಿದ್ದೆವು. ಹೃಷಿಕೇಶ್ ಹತ್ತಿರದ ತಪೋವನ್ ಎಂಬ ಸ್ಥಳದಿಂದ ನಮ್ಮ ಪಿಕ್ಅಪ್ ನಿಗದಿಯಾಗಿತ್ತು. ಹರಿದ್ವಾರದಿಂದ ಚಾರಣಿಗರನ್ನೆಲ್ಲ ಕರೆದುಕೊಂಡು ಹೊರ ಟ ಟಿ.ಟಿ ಯಲ್ಲಿ ಸ್ಥಳವಿಲ್ಲದ್ದರಿಂದ, ಅವರದ್ದೇ ಇನ್ನೊಂದು ವಾಹನ, ಹಿಂದಕ್ಕಿದ್ದ ಟಾಟಾ ಸುಮೋದಲ್ಲಿ ನನ್ನನ್ನು ಮತ್ತು (ಲಕ್ಷ್ಮಿ) ಚಿನ್ನಕ್ಕಳನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿದ್ದರು.ಅನೇಕ ಸ್ಥಳಗಳಿಗೆ ಫ್ಯಾಮಿಲಿ ಟ್ರಿಪ್ಸ್ ಓಡಾಡಿದ್ದೆ ಆದರೆ ಮನೆಯಿಂದ ಈ ರೀತಿಯಾಗಿ ಒಬ್ಬಳೇ ಹೊರಟಿದ್ದು ಇದೇ ಮೊದಲ ಅನುಭವ. ಚಾರಣದ ಸ್ಥಳ, ಚಾರಣಿಗರ ಸಂಗಡ, ಅಲ್ಲಿ ದೊರಕಬಹುದಾದ ಸುರಕ್ಷೆ, ವ್ಯವಸ್ಥೆ ಅವ್ಯವಸ್ಥೆಗಳ ಕುರಿತು ಒಂದು ಚೂರು ಅಳುಕು ಇದ್ದದ್ದೂ ನಿಜ.. ಮಳೆಯ ಪರಿಣಾಮವಾಗಿ (ಮಳೆ ಹೆಚ್ಚಾದಾಗ ಯಾವ ಸಮಯಕ್ಕೆ ಯಾವ ರಸ್ತೆಗೆ ಯಾವ ಗುಡ್ಡಗಳು ಕುಸಿದು ಬೀಳುತ್ತವೆ ಎಂದು ಹೇಳಲಾಗದಂತಹ ಪರಿಸ್ಥಿತಿ) ಸುಧೀರ್ಘ 1.5 ತಾಸಿನ ಕಾಯ್ವಿಕೆಯ ನಂತರ ಬಂದು ತಲುಪಿದ ಗಾಡಿಯನ್ನು ಹತ್ತಿ ಕುಳಿತೆವು. ಪಕ್ಕಕ್ಕೆ ನೋಡಿದರೆ ಇಬ್ಬರು ದೈತ್ಯಾಕಾರದ ವ್ಯಕ್ತಿಗಳು. ಮಳೆಯ ರೈನ್ಕೋಟ್, ಬೆನ್ನಿಗೆ ಹೊತ್ತಿದ್ದ ದೊಡ್ಡ ಬ್ಯಾಗ್, ನಮ್ಮ ನೀರಿನ ಬಾಟಲ್, ಕ್ಯಾಮೆರಾ ಎಲ್ಲವನ್ನೂ ಒಂದು ಹಂತಕ್ಕೆ  ಜೋಡಿಸಿ ಎತ್ತಿಟ್ಟು, ಕುಳಿತುಕೊಳ್ಳಲು ಸ್ಥಳವನ್ನೆಲ್ಲ ಸರಿ ಮಾಡಿಕೊಂಡದ್ದಾಯಿತು. ನಮಗೋ ಆ ಕಡೆ ಈ ಕಡೆ ಪ್ರಕೃತಿಯ...