ಪೋಸ್ಟ್‌ಗಳು

2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಾರತೀಯ ನೃತ್ಯಕಲೆ

ಭಾರತವು ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಭಾರತೀಯ ನೃತ್ಯವು ಅಂತಹ ಗೌರವಾನ್ವಿತ ಗುರುತುಗಳಲ್ಲಿ ಒಂದು.  ಭಾರತದಲ್ಲಿ, ಆಯಾಯ ಭೌಗೋಳಿಕ  ಪ್ರದೇಶಗಳಿಗೆ, ಅಲ್ಲಿನ ಸ್ಥಳೀಯ ಸಂಪ್ರದಾಯಗಳಿಗೆ, ರೀತಿನೀತಿಗಳಿಗೆ ತಕ್ಕಂತೆ ಅನೇಕ ಮಾದರಿಯ ನೃತ್ಯಗಳು, ರೂಪ ತಾಳಿ, ಅಭಿವೃದ್ಧಿ ಹೊಂದಿವೆ. ಮುಖ್ಯವಾಗಿ, ಭರತನಾಟ್ಯ, ಕುಚಿಪುಡಿ, ಕಥಕ್, ಒಡಿಸ್ಸಿ, ಕಥಕಳಿ ಇತ್ಯಾದಿ  ಶಾಸ್ತ್ರೀಯ ನೃತ್ಯಮಾದರಿಗಳು ಜಗತ್ಪ್ರಸಿದ್ಧ ಕಲೆಗಳೆನಿಸಿವೆ.  ಇದರ ಜೊತೆಗೆ, ಯಕ್ಷಗಾನ, ಡೊಳ್ಳು, ಕರಗ, ಝೂಮರ್, ಲಾವಣಿ, ಭಾಂಗ್ರಾ, ಗಿಡ್ಡ, ರಾಸಲೀಲಾ, ಗರ್ಬಾ, ಧಾಂಡೀಯ, ಲಂಬಾಡಿ ನೃತ್ಯ, ಬಿಹು ಇತ್ಯಾದಿ ಮೂವತ್ತಕ್ಕೂ ಹೆಚ್ಚು ಬಗೆಯ ಜಾನಪದ ನೃತ್ಯ ಕಲೆಗಳು  ನಮ್ಮ ಭಾರತೀಯ ಸಂಸ್ಕೃತಿಗೆ  ಅನನ್ಯತೆ ಮತ್ತು ನವೀನತೆಯನ್ನು ತಂದಿದೆ.  ಪ್ರತೀ ೧೦೦ ಕಿ.ಮೀ ಗೆ ಉಪಭಾಷೆಗಳು ಬದಲಾಗುವಂತಹ ವೈವಿಧ್ಯಮಯ ದೇಶ ನಮ್ಮದು. ನೃತ್ಯ ಶೈಲಿ, ಉಡುಗೆ, ಕಲಾವಿದರು ಬದಲಾಗುತ್ತಾರೆ. ಆದರೆ ಎಲ್ಲದರ ಮೂಲ ಉದ್ದೇಶವೊಂದೇ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಉಂಟಾಗುವ ನಾನಾ ಬಗೆಯ ಅನುಭವಗಳಿಗೆ ಒಂದು ಜನಾಂಗ ಚಲನೆಯ  ವ್ಯಕ್ತಪಡಿಸುವ ಪ್ರತಿಕ್ರಿಯೆಯಾಗಿ ಜಾನಪದ ನೃತ್ಯಗಳು ಹುಟ್ಟಿಕೊಂಡದ್ದು. ದೇವರಿಗೆ ಕೃತಜ್ಞತೆ ಸಲ್ಲಿಸಲು, ಬದುಕಿನ  ಬೇರೆ ಬೇರೆ ವೃತ್ತಿ ಜವಾಬ್ಧಾರಿಗಳ ನೆನಪಿಸಿಕೊಳ್ಳಲು , ಸಂತೋಷ ಸಂಭ್ರಮಿಸಲು, ಕೆಡು...

ಸಿಕ್ಕಿಂ - ಟಿಬೆಟಿಯನ್ ಧ್ವಜಗಳು

ಇಮೇಜ್
ಹಿಮಾಲಯದ ಕಾಂತೀಯ ನೋಟಗಳೊಂದಿಗೆ, ಗಮನಾರ್ಹವಾದ ಗಮ್ಯಸ್ಥಾನಗಳ ಹೇರಳತೆಯೊಂದಿಗೆ ಸರ್ವ ಕಾಲಕ್ಕೂ, ಭೇಟಿ ನೀಡಬಹುದಾದ ಪ್ರವಾಸ ಸ್ಥಳಗಳಲ್ಲಿ, ಭಾರತದ ಈಶಾನ್ಯ ಭಾಗದಲ್ಲಿರುವ ಸಿಕ್ಕಿಂ ಕೂಡ ಒಂದು. ಸೆವೆನ್ ಸಿಸ್ಟರ್ಸ್ ರಾಜ್ಯಗಳ ಪೈಕಿ ಕಿರಿದು. ದಾರ್ಜೀಲಿಂಗ್ ನಲ್ಲಿರುವಂತೆಯೇ, ಸಿಕ್ಕಿಂನಲ್ಲೂ ಕೂಡ ಟಿಬೆಟಿಯನ್ ಮೊನಸ್ಟರಿಗಳು, ಬೌದ್ಧ ಧರ್ಮದ ಅನುಯಾಯಿಗಳು ಸಾಕಷ್ಟು ಜನರಿದ್ದಾರೆ.  ಹಿಮಾಲಯದ ಪರ್ವತಗಳು, ಬೆಳ್ಳನೆಯ ಮೋಡಗಳು, ಇಬ್ಬನಿ ಹರಡಿ ಕ್ಷಣಕ್ಷಣಕ್ಕೆ ಮಬ್ಬಾಗುವ ಹಾದಿಗಳು, ಹಚ್ಚಹಸಿರು ಮತ್ತವುಗಳ ಮಧ್ಯೆ ಅಲ್ಲಲ್ಲಿ ಕಾಣಿಸುವ ಬೌದ್ಧ ಧರ್ಮದ ಬಣ್ಣ ಬಣ್ಣದ ಧ್ವಜಗಳು!ಈ ವಿವಿಧ ಬಗೆಯ ಧ್ವಜಗಳು ನೋಡುಗರಿಗೆ ಅವರವರ ಭಾವಕ್ಕೆ ತಕ್ಕಂತೆ ಸಾಂತ್ವನ, ಸಂತಸದ ಅನುಭವವನ್ನು ನೀಡುತ್ತದೆ. ನಮ್ಮ ಪ್ರವಾಸದ ಹಾದಿಯುದ್ದಕ್ಕೂ ಕಾಣಸಿಗುತ್ತಿದ್ದ ಈ ಬಣ್ಣಬಣ್ಣದ ಧ್ವಜಗಳ ಕುರಿತಾಗಿ ಸಂಗ್ರಹಿಸಿದ ಒಂದಷ್ಟು ವಿಷಯಗಳು..  ಚಿತ್ರಗಳೊಂದಿಗೆ..  ಟಿಬೆಟಿಯನ್ ಜನರು ಪ್ರಕೃತಿಯನ್ನು ಗೌರವಿಸಲು ಈ ಪ್ರಾರ್ಥನಾ ಧ್ವಜಗಳನ್ನು ನೆಡುತ್ತಾರೆ. ಧ್ವಜದಲ್ಲಿನ ಐದು ಬಣ್ಣಗಳಲ್ಲಿ ಬಿಳಿ ಬಣ್ಣ ಗಾಳಿಯನ್ನೂ, ಕೆಂಪು ಬಣ್ಣ ಬೆಂಕಿಯನ್ನೂ, ಹಸಿರು ಬಣ್ಣ ನೀರನ್ನೂ, ಹಳದಿ ಭೂಮಿಯನ್ನೂ ಮತ್ತು ನೀಲಿ ಆಕಾಶವನ್ನು ಸಂಕೇತಿಸುತ್ತದೆ. ಈ ಧ್ವಜಗಳಲ್ಲಿ ಬೌದ್ಧರ ಮೂಲ ಪ್ರಾರ್ಥನಾ ಮಂತ್ರವಾದ ' ಓಂ ಮಣಿ ಪದ್ಮೇಹಂ" ಎಂದು ಬರೆದಿರುತ್ತದೆ. ಅಹಂಕಾರ, ಅಸೂಯೆ, ಅಜ್ಞಾನ, ದುರಾಸೆ ...

ಟಿಬೆಟಿಯನ್ ಘುಮ್ ಮೊನಸ್ಟರಿ

ಇಮೇಜ್
ದಾರ್ಜೀಲಿಂಗ್ ಸುತ್ತಮುತ್ತಲಿನ ಪ್ರಾಕೃತಿಕ ಸೌಂದರ್ಯವಂತೂ ವರ್ಣಿಸಲಸದಳ. ಅದರ ಜೊತೆಯಲ್ಲಿ, ದಸರಾ ಸಮಯದಲ್ಲಿ ದಾರ್ಜೀಲಿಂಗ್ ಪ್ರವಾಸ ಹೋದದ್ದು, ಅಲ್ಲಿನ ಅನೇಕ ಧರ್ಮಗಳ ಹಬ್ಬಗಳ ಆಚರಣೆಯ ಕುರಿತಾಗಿಯೂ ತಿಳಿಯಲು ಸಹಾಯಕವಾಯಿತು. ಅಂತದೇ ಒಂದು ದೇವಿ ಪೂಜೆಯ ಆಚರಣೆಯ ವಿಶೇಷತೆ ಕಂಡದ್ದು ಅಲ್ಲಿನ ಟಿಬೆಟಿಯನ್ ಘುಊಮ್ಮೊನಸ್ಟರಿಯಲ್ಲಿ.    ದಾರ್ಜೀಲಿಂಗ್ ನಲ್ಲಿರುವ ಟಿಬೆಟಿಯನ್ ಘುಮ್ ಮೊನಸ್ಟರಿಗೆ (ಮಠ) ಭೇಟಿ ಇತ್ತ ಕ್ಷಣ. ಭವಿಷ್ಯದ ಬುದ್ಧ ಎಂದು ಕರೆಯಲಾಗುವ ಗೌತಮ ಬುದ್ಧನ ಉತ್ತರಾಧಿಕಾರಿ, 'ಮೈತ್ರೇಯ' ಬುದ್ಧನ ದೇವಾಲಯವಿದು. ಟಿಬೆಟಿಯನ್ ಶೈಲಿಯಲ್ಲಿ ನಿರ್ಮಾಣವಾಗಿರುವ ಈ ಧರ್ಮಮಠದ ಬಾಗಿಲಿನ ಕಮಾನಿನಲ್ಲಿ ಗರುಡನ ಕೆತ್ತನೆಯಿದೆ.  ಮೈತ್ರೇಯ ಬುದ್ಧನ ೧೫ ಅಡಿ ಎತ್ತರದ ಸಿಂಗರಿಸಿದ ಅದ್ಭುತ ಮೂರ್ತಿಯನ್ನು ಟಿಬೆಟಿನ್ನಿಂದಲೇ ಮಣ್ಣನ್ನು ತರಿಸಿ ಮಾಡಿದ ಮೂರ್ತಿಯಂತೆ! ಇದರ ಮುಂದಿರುವ ಎರಡು ದೊಡ್ಡ ಎಣ್ಣೆಯ ದೀಪಗಳು ಈ ವರೆಗೆ ಆರಿದ ದಾಖಲೆಯಿಲ್ಲ ಎನ್ನುತ್ತಾರೆ ಅಲ್ಲಿನ ಬೌದ್ಧ ಸನ್ಯಾಸಿಯೊಬ್ಬರು. ದೀಪದ  ಸುತ್ತಲಿನ ಗೋಡೆಗಳಮೇಲೆ ಬುದ್ಧನ ಕುರಿತಾದ ವರ್ಣರಂಜಿತ ಕಿರುಚಿತ್ರಗಳು,ಅಲ್ಲಿ ಟಿಬೆಟಿಯನ್ ಬೌದ್ಧರು ಸಾಲಾಗಿ ಕುಳಿತುಕೊಂಡು ಒಂದೇ ರಾಗದಲ್ಲಿ ಮಂತ್ರ ಪಠನೆ ಮಾಡುತ್ತಿದ್ದುದು, ಡ್ರಮ್ಸ್ ಮತ್ತು ಸಿಂಬಲ್ಸ್ ಬಡಿತ, ಪೈಪ್ಮಾದರಿಯ ಸಂಗೀತ ವಾದ್ಯಗಳ ನುಡಿಸುತ್ತ ಮಾಡಿದ ಪ್ರಾರ್ಥನೆ ಎಲ್ಲವೂ ಸೇರಿ ಒಂದು ರೀತಿಯ ಮಾಂತ್ರಿಕ ಭಾವನೆ ನೀಡ...

ಬೆಟ್ಟಗಳ ರಾಣಿ - ದಾರ್ಜೀಲಿಂಗ್

ಇಮೇಜ್
ಹಿಮಾಲಯದ ಪರ್ವತ ಶ್ರೇಣಿಗಳೆಂದರೆ ನನಗೇಕೋ ಮುಗಿಯದ ಆಸೆ. ಈ ಸಲದ ಪ್ರವಾಸಕ್ಕೆ ನಮ್ಮ ಗಮನ ಸೆಳೆದದ್ದು ಪಶ್ಚಿಮ ಬಂಗಾಳ.  ದಾರ್ಜೀಲಿಂಗ್ ಒಂದು ಅತ್ಯಂತ ಸುಂದರವಾದ ಗಿರಿಧಾಮ, ಹಿಮಾಲಯದ ಪರ್ವತ ಶ್ರೇಣಿಯ ಕೆಳಭಾಗದಲ್ಲಿ ಇರುವ ಈ ಪಟ್ಟಣ, ಯುನೆಸ್ಕೋ ದ ವಿಶ್ವ ಪರಂಪರೆಯ ತಾಣದಲ್ಲಿ ಒಂದು. ಪ್ರವಾಸಿಗರಾಗಿ ಈ ಪ್ರದೇಶದ ಸೌಂದರ್ಯವನ್ನು ಸವಿಯಬೇಕೆಂದರೆ, ಡಿಸೇಂಬರ್ ನಂತರದ ಹಿಮಸುರಿತವನ್ನು ಅನುಭವಿಸಬೇಕು ಎಂದು ಕೆಲವರು ಹೇಳಿದ್ದನ್ನು ಕೇಳಿದ್ದೆವು. ಆದರೂ ವರ್ಷವಿಡೀ ಮಂಜು ಕವಿದಿರುವ ಊರು, ಹಿಮಾಲಯದ ಮಹೋನ್ನತ ಶ್ರೇಣಿಯ ಪ್ರದೇಶ ಎಂಬ ಅರಿವಿದ್ದರಿಂದ, ಈ ಸಮಯಕ್ಕೆ ಕಾಣಸಿಗುವ ವೈವಿದ್ಯತೆಯನ್ನು ನೋಡಲು ನಾವು ತಯಾರಾಗಿಯೇ ಹೋಗಿದ್ದೆವು.  ದಾರ್ಜೀಲಿಂಗ್ ಅನ್ನು ಹೆಚ್ಚು ಕಮ್ಮಿ ಬ್ರಿಟಿಷರು ಕಟ್ಟಿದ ನಾಡು ಎಂದೇ ಹೇಳಬಹುದು. ದಾರ್ಜೀಲಿಂಗ್ ನ ಉತ್ತಮ ಹವಾಗುಣದಿಂದ ಆಕರ್ಷಿತವಾಗಿ, ಈಸ್ಟ್ ಇಂಡಿಯಾ ಕಂಪೆನಿಯ ಅಧಿಕಾರಿಗಳ ನಿಯೋಗ, ಈ ಊರನ್ನು ಸಿಕ್ಕಿಂ ರಾಜರಿಂದ ಗುತ್ತಿಗೆಪಡೆದಿದ್ದು. ತೀಕ್ಷ ಉಷ್ಟತೆಯಿಂದ ರಕ್ಷಿಸಿಕೊಳ್ಳಲು ಬ್ರಿಟಿಷರಿಗೆ ಇದೊಂದು ಅತ್ಯಂತ ಪ್ರಿಯವಾದ ಸ್ಟಳವಾಗಿತ್ತು. ಗಿರಿಧಾಮದ ನಿರ್ಮಾಣ, ಪ್ರಾಯೋಗಿಕ ಚಹಾ ತೋಟದ ಹುಟ್ಟು, ಅಲ್ಲಿ ಬಂದು ತಂಗುವ ಬ್ರಿಟಿಷ್ ಜನರಿಗಾಗಿ ಶಿಕ್ಷಣ ಮತ್ತು ಅನೇಕ ಬಗೆಯ ಕ್ಷೇಮಾಭಿವೃದ್ಧಿ ಕೇಂದ್ರಗಳ ನಿರ್ಮಾಣ ಹೀಗೆ ಹಂತಹಂತವಾಗಿ ಮೂಡಿತು ದಾರ್ಜೀಲಿಂಗ್ ಪಟ್ಟಣ. ಅಂದಿನ ದಾರ್...

ಯೋಗ ಯಾತ್ರೆ - ಕನ್ಯಾಕುಮಾರಿ

ಇಮೇಜ್
ಭಾರತದ ದಕ್ಷಿಣದ ತುತ್ತತುದಿಯಲ್ಲಿ, ಹಿಂದೂ ಮಹಾ ಸಾಗರ, ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರ ಎಂಬ ಮೂರು ಮಹಾಸಾಗರಗಳು ಸಂಗಮವಾಗುವ ಸ್ಥಳದ ತಟದಲ್ಲಿದೆ ಕನ್ಯಾಕುಮಾರಿ. ಐತಿಹಾಸಿಕ ಪ್ರಸಿದ್ಧತೆ ಪಡೆದಿರುವ ಈ ಒಂದು ಪುಣ್ಯಕ್ಷೇತ್ರವನ್ನು ನೋಡುವ ಆಸೆ ಮೊದಲಿನಿಂದಲೂ ಇದ್ದರೂ, ಅದು ಹೇಗೋ ನನಗೆ  ಕನ್ಯಾಕುಮಾರಿ ನೋಡುವ ಕಾಲ ಕೂಡಿ ಬಂದಿರಲಿಲ್ಲ. ಯೋಗ ಟ್ರೈನರ್ ಕೋರ್ಸನ್ನು ಪಡೆಯುತ್ತಿರುವ ನನಗೆ, ನನ್ನ ಗುರುಗಳಾದ ಅಶೋಕ್ ಸರ್ ಇಂತಹದ್ದೊಂದು ಯೋಗ ಕಾನ್ಫರೆನ್ಸ್ ಬಗ್ಗೆತಿಳಿಸಿರದಿದ್ದರೆ, ಅದೆಂತಹ ಅದ್ಭುತ ಅವಕಾಶವನ್ನು ತಪ್ಪಿಸಿಕೊಳ್ಳುತ್ತಿದ್ದೆ ಎಂಬುದು ಈ ಪ್ರವಾಸ ಮುಗಿಸಿ ಬಂದವಳಿಗೆ ಅರಿವಾಗುತ್ತಿದೆ.  'ಯೋಗ ಶಾಸ್ತ್ರ ಸಂಗಮ' ಎಂಬ ರಾಷ್ಟ್ರೀಯ ಯೋಗ ಸಮ್ಮೇಳನಕ್ಕೆ ಭಾಗವಹಿಸುವ ಉದ್ದೇಶದ ಮೂಲಕ, ಕಲಿಯುತ್ತಿರುವ ಯೋಗ ವಿಚಾರವಾಗಿ ಅದೆಷ್ಟೋ ಗೊತ್ತಿರದ ಮಾಹಿತಿಗಳನ್ನು ತಿಳಿಯಲು, ಈ ಪುಣ್ಯಕ್ಷೇತ್ರದ ಪ್ರಸಿದ್ಧ ಸ್ಥಳಗಳನ್ನು ನೋಡಲು, ಇಷ್ಟದ ಟ್ರೆಕಿಂಗ್ ಮಾಡಲು, ಸತ್ಸಂಗದ ಮೂಲಕ ಮೂರು ದಿನಗಳಲ್ಲಿ ನಲವತ್ತಕ್ಕೂ ಹೆಚ್ಚು ಸ್ನೇಹಿತ ಸ್ನೇಹಿತೆಯರನ್ನು ಪಡೆಯುವ ಅವಕಾಶವಾದ್ದು ನನ್ನ ಪಾಲಿನ ಅದೃಷ್ಟವೇ ಸರಿ! ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ ಇವರು ಪ್ರತಿವರ್ಷದಂತೆ, ವಿಶಿಷ್ಟವಾಗಿ ರಾಷ್ಟ್ರೀಯ ಯೋಗ ಸಮ್ಮೇಳನವನ್ನು ನಡೆಸುತ್ತಾರೆ. ಈ ಮೂರು ದಿನಗಳಲ್ಲಿ ಯೋಗ ಶಾಸ್ತ್ರದ ಕುರಿತಾದ ಅ...