ಪೋಸ್ಟ್‌ಗಳು

ಅಕ್ಟೋಬರ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Odisha - Land of Art

ಇಮೇಜ್
ನಮ್ಮ ಓಡಿಶಾ ಪ್ರವಾಸದಲ್ಲಿ, ನಾವು ಮೊದಲು ಮೆಟ್ಟಿದ ನಗರ ರಾಜಧಾನಿ ಭುವನೇಶ್ವರ. ಸುಮಾರು  400+ sq. Km ಇರುವ ಈ ನಗರದಲ್ಲಿ, ಏರ್ಪೋರ್ಟ್ನಿಂದ ಹೊರಟು ಹೋಟೆಲ್ ತಲುಪುವವರೆಗೂ ಕಣ್ಣಾಡಿಸಿದ ಜಾಗದಲ್ಲೆಲ್ಲಾ ನಮ್ಮನ್ನು ಆಕರ್ಷಿಸಿದ ಎರಡು ಮುಖ್ಯ ವಸ್ತು ವಿಷಯಗಳು ಒಂದು ನಗರದ ಅದ್ಭುತ ಸ್ವಚ್ಛತೆ ಮತ್ತೊಂದು, ರಸ್ತೆಯ ಬದಿಯ ಗೋಡೆಗಳಿಂದ ಹಿಡಿದು, ರಸ್ತೆಯ ಬದಿಯ ಮನೆಗಳ ಗೋಡೆಗಳು ಸೇರಿದಂತೆ ಎಲ್ಲವೂ ಕೂಡ ಚಿತ್ರಕಲೆಗಳಿಂದ ಸಿಂಗರಿಸಿ ಹೋಗಿತ್ತು, ಇಡೀ ಊರಿಗೆ ಊರಿನ ಗೋಡೆಗಳೆಲ್ಲವೂ ಪೇಂಟಿಂಗ್ ಕ್ಯಾನ್ವಾಸ್ಗಳೇ!! ಕಣ್ಣು ಹಾಯಿಸಿದಲ್ಲೆಲ್ಲ ರಸ್ತೆಯ ಬದಿ ಕಾಂಪೌಂಡಿನ ಮೇಲೆಲ್ಲಾ, ಒಡಿಸ್ಸಾದ ಇತಿಹಾಸ, ನೃತ್ಯ, ಜಾನಪದ ಕಲೆ, ಸಂಸ್ಕೃತಿ-ಸಾಹಿತ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಕುರಿತಾದ, ಒಂದಕ್ಕಿಂತ ಒಂದು ಚೆಂದದ ಪೇಂಟಿಂಗ್ಗಳು!! ಪೌರಾಣಿಕ ನಿರೂಪಣೆ ಮತ್ತು ಜಾನಪದ ಕಥೆಗಳನ್ನು ಚಿತ್ರಗಳ ಮೂಲಕ ಪ್ರತಿಬಿಂಬಿಸುವ ಪಟ್ಟ ಚಿತ್ರಗಳ ಡಿಸೈನ್ಗಳು ನೋಡಿದಲ್ಲೆಲ್ಲ ಮನಸ್ಸಿಗೆ ಮುದವನ್ನು ನೀಡುವಂತಿದೆ. ಶಾಲಾ ಕಾಲೇಜುಗಳು, ಪೋಸ್ಟ್ ಆಫೀಸ್, ಪೊಲೀಸ್ ಠಾಣೆ, ಆಸ್ಪತ್ರೆ, ಫ್ಲೈ ಓವರ್, ಟ್ರಾಫಿಕ್ ಜಂಕ್ಷನ್ಗಳು ಇತ್ಯಾದಿ ಕಟ್ಟಡಗಳ ಜೊತೆಗೆ ಇನ್ನಿತರ ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಮೇಲೆ ಅವುಗಳ ಕಾರ್ಯನಿರ್ವಹಣೆಯ ಕುರಿತಾದ ವಿಷಯಗಳ ಪೇಂಟಿಂಗ್ಗಳು ಎಲ್ಲೆಡೆ ಕಾಣಸಿಗುತ್ತಿದ್ದವು. ಇಲ್ಲಿನ ದೇವಾಲಯಗಳು ಮತ್ತು ದೈವಿಕತೆಗೆ ಸಂಬಂಧಪಟ್ಟಂತಹ ಚಿತ್ರಗಳು, ಜಾನಪದ ...

ಚೌಸಟ್ ಯೋಗಿನಿ ದೇವಾಲಯ

ಇಮೇಜ್
ಭುವನೇಶ್ವರದ ನಗರದೊಳಗಿನ ಪ್ರಮುಖ ದೇವಾಲಯಗಳನ್ನೆಲ್ಲ ಮುಗಿಸಿ, ಮತ್ತಿನ್ಯಾವ ವಿಶಿಷ್ಟ ಸ್ಥಳವನ್ನು ನೋಡಬಹುದು ಎಂದು ಹುಡುಕಿದಾಗ ಗೂಗಲಮ್ಮ ಹೇಳಿದ್ದು, ಚೌಸ ಯೋಗಿನಿ ದೇವಾಲಯದ ಬಗ್ಗೆ. ಬೇರೆ ದೇವಾಲಯಗಳಷ್ಟು ಪ್ರಸಿದ್ಧ ಮಾಹಿತಿಗಳು ಇರದಿದ್ದರೂ, ಯೋಗಿನಿ ದೇವಾಲಯ ಭೇಟಿ ನೀಡಲೇ ಬೇಕು ಎಂದುಕೊಂಡು ಹೋಟೆಲ್ಲಿನಿಂದ ಆಕ್ಷಣಕ್ಕೆ ಕಾಲ್ಕಿತ್ತೆವು. ಗೂಗಲ್ ಮ್ಯಾಪ್ ಪ್ರಕಾರ ಪಟ್ಟಣದಿಂದ ಸುಮಾರು ೧೫ ಕಿಮೀ ಹೊರಭಾಗದಲ್ಲಿ ಇತ್ತು ಈ ದೇವಾಲಯ. ಹಾದಿ ಸಾಗುತ್ತ ಹೋದಂತೆ, ಮುಂದಕ್ಕೆ ಯಾರೂ ಹೆಚ್ಚು ಓಡಾಡದ ಹಳ್ಳಿಯ ರಸ್ತೆಗಳಲ್ಲಿ ನಮ್ಮ ಗಾಡಿಚಲಿಸುತ್ತಿತ್ತು. ಭೈರವಿ ನದಿಯ ಪಕ್ಕದಲ್ಲಿ ಹಾದುಹೋಗುವ ಈ ಹಾದಿಯಲ್ಲಿ ಎಡ ಬಲಗಳ ತಿರುಗಾಟವಾಗಿ, ಸ್ವಲ್ಪ ಸಮಯಕ್ಕೆ  ಗೂಗಲ್ ಮ್ಯಾಪ್ ಕೂಡ ಹಾದಿ ತೋರಿಸುತ್ತಿಲ್ಲ ಎಂದಾಗ ಹೇಗೆ ತಲುಪುವುದಪ್ಪಾ ಎಂದು ತುಸು ಆತಂಕವಾದರೂ, ಯಾರನ್ನಾದರೂ ಕೇಳುತ್ತಲೇ ಸಾಗುವುದು ಎಂದು ನಿರ್ಧರಿಸಿ ಮುಂದೆ ಸಾಗಿದೆವು. ತುಸು ಹೊತ್ತಿಗೆ ಮತ್ತೆ ಗೂಗಲ್ ಮ್ಯಾಪ್ಸ್ ಮಾಹಿತಿ ನೀಡಿ ಸಹಕರಿಸಿತು.  ಅದೊಂದು ಪುಟ್ಟ ಹಳ್ಳಿ ಹಿರಾಪುರ. ಊರ ಮನೆಗಳ ಮುಂದೆ ಹಾದು ಹೋಗುವ ಸಣ್ಣ ರಸ್ತೆಗಳ ದಾಟಿದಂತೆ ಮುಂದೆ ಅನಾವರಣ ಗೊಂಡಿದ್ದು ಒಂದು ಪುರಾತನ ಸಣ್ಣ ದೇವಾಲಯದ ವರಾಂಗಣ. ದೂರದಿಂದ ಕಲ್ಲಿನ ಸಣ್ಣ ವರ್ತುಲದಂತೆ ಕಾಣುತ್ತಿದ್ದ ಕಲ್ಲಿನ ಸ್ಮಾರಕದಲ್ಲಿ ಅಂತಹದ್ದೇನಿರಬಹುದು ಎಂದುಕೊಂಡು ಹೋದವಳಿಗೆ, ಹೊರಬರುವಾಗ ಇಂತದ್ದೊಂದು ಸ್ಥಳವನ್ನು ನೋಡದೇ...

ನಮ್ಮ ಆಹಾರವೇ ನಮಗೆ ಔಷಧಿ

ಇಮೇಜ್
ಮೇಲಿಂದ ಮೇಲೆ ಬರುವ ಸಾಂಕ್ರಾಮಿಕ ರೋಗಗಳು , ಹೃದಯ ಸಂಬಂಧೀ ಕಾಯಿಲೆಗಳ ಅನುಭವ ಪಡೆದ ಮೇಲೆ, ಸಾವು ನೋವುಗಳ ಸುದ್ದಿಗಳ ಕೇಳಿದ ಮೇಲೆ, "ಆರೋಗ್ಯವೇ ಭಾಗ್ಯ" ಎಂಬ ಮಾತು ಸತ್ಯ ಎಂಬುದು ಅರಿವಾಗಿದೆ. ಆದರೇನು ಮಾಡುವುದು? ಇಂದಿನ ಯಾಂತ್ರಿಕ ಯುಗದಲ್ಲಿ ಕೈಯಳತೆಯಲ್ಲಿ ಬೇಕಾಗಿದ್ದೆಲ್ಲ ಸಿಗುವ ಮಾರಾಟ ಸೌಲಭ್ಯ, ಹೆಚ್ಚಾದ ಮನುಷ್ಯನ ಆಸೆಗಳು, ಮೆಚ್ಚುಗೆಯಾದ ಕಷ್ಟಪಡದ ಬದುಕು ಇತ್ಯಾದಿ ಅಂಶಗಳಿಂದ, ಆಹಾರ ಸಾಮಗ್ರಿಗಳು ಸ್ಥಳೀಯತೆ ಕಳೆದುಕೊಂಡು, ಹೆಚ್ಚೆಚ್ಚು ರೆಡಿ ಟು ಈಟ್, ಪ್ಯಾಕಡ್ ಫುಡ್ಸುಗಳು ನಮ್ಮ ಬದುಕಿನಲ್ಲಿ ಹಾಸುಹೊಕ್ಕಿ ಹೋಗಿವೆ. ಮನೆಯ ಮೆಟ್ಟಿಲಿಳಿ್ದರೆ ಹೊರಗಿನ ತಿಂಡಿ ಕಣ್ಣು ಕುಕ್ಕುತ್ತದೆ.  ಆ ಮೋಹದಿಂದ ಹೊರಬರುವುದು ಹೇಗೆ? ಅದಕ್ಕೆ ಒಂದೇ ಪರಿಹಾರ. ನಾವು ಮನೆಯಲ್ಲಿ ತಿನ್ನುವ ಆಹಾರವನ್ನು ಅರಿತುಕೊಳ್ಳುವುದು. ಜಗತ್ತಿನಲ್ಲಿ ಒಬ್ಬರಂತೆ ಇನ್ನೊಬ್ಬರಿರುವುದಿಲ್ಲ. ಪ್ರತಿಯೊಬ್ಬರ ದೇಹ ಪ್ರಕೃತಿಯೂ ವಿಭಿನ್ನ. ನಮ್ಮ ದೇಹಕ್ಕೆ ಯಾವುದು ಹಿತ ಅಹಿತ ಎಂಬುದು ನಾವೇ ಅಧ್ಯಯನ ಮಾಡಿಕೊಳ್ಳಬೇಕು. ಆಹಾರ ಎಂದರೆ ಕೇವಲ ಹೊಟ್ಟೆ ತುಂಬಿಸುವುದು ಎಂದರ್ಥವಲ್ಲ. ದೇಹವನ್ನು ರೋಗಮುಕ್ತವನ್ನಾಗಿಸಿ, ಸ್ವಾಸ್ಥತೆಯಿಂದ ಇಡಲು ಬೇಕಾದ ಪೋಷಕಾಂಶಗಳನ್ನು ನೀಡುವುದೇ ಆಹಾರ. ಹಾಗಾಗಿ ಎಷ್ಟು ಪ್ರಮಾಣದ ಆಹಾರ, ಯಾವ ಬಗೆಯ ಆಹಾರ, ಯಾವ ಕ್ರಮದಲ್ಲಿ, ಯಾವಾಗ ತೆಗೆದುಕೊಳ್ಳಬೇಕು ಎಂಬ ವಿಷಯಗಳೂ ಇಲ್ಲಿ ಮುಖ್ಯ.  ಆಹಾರವನ್ನು ಔಷಧಿಯೇ ಎಂದುಕೊಂಡು ಬಳಸಿದರೆ, ಮುಂದೆ...