ಪೋಸ್ಟ್‌ಗಳು

#touristplace ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹೆರಿಟೇಜ್ ವಿಲೇಜ್ - ರಘುರಾಜ್ಪುರ

ಇಮೇಜ್
ಒಡಿಶಾ ಪ್ರವಾಸ ಮಾಡಿದ್ದ ಗೆಳೆಯನೊಬ್ಬ, ನೀ ಅಲ್ಲಿ ಆರ್ಟ್ ವಿಲ್ಲೇಜ್ ಗೆ ಹೋಗಕ್ಕೇ.. ನಿಂಗ್ ಭಾರೀ ಇಷ್ಟ ಆಗ್ತು ಎಂದು ಹೇಳಿದ್ದು ವರ್ಷಗಳಿಂದ ಮನಸ್ಸಿನಲ್ಲಿ ಬರೆದಿಟ್ಟ ಷರಾ ಆಗಿತ್ತು. ಕಲೆಯ ಕುರಿತು ಆಸಕ್ತಿ ಇರುವ ನನಗಂತೂ, ಇಡೀ ಊರಿಗೆ ಊರೇ ಪೇಂಟಿಂಗ್ ಮತ್ತು ಆರ್ಟ್ ಗಳಿಂದ ತುಂಬಿರುತ್ತದೆ, ಎಂಬ ವಿಷಯವೇ  ಪುಳಕವಾಗಿತ್ತು. ನಮ್ಮ ಪ್ರವಾಸದ ಸಮಯದಲ್ಲಿ ಇಂಟರ್ನೆಟ್ ಮಾಹಿತಿ ಒಟ್ಟು ಮಾಡಿಕೊಂಡು ತಯಾರಾಗಿ ಹೋದೆವು. ಪುರಿ ನಗರಿಯ ಹೊರಗೆ, ಭುವನೇಶ್ವರ್ ಕಡೆಗೆ ಹೈವೆಯಲ್ಲಿ ೧೪ ಕಿಮೀ ಮುಂದಕ್ಕೆ ಹೋದರೆ, ಚಂದನಾಪುರ್ ಸಿಗುತ್ತದೆ, ಅಲ್ಲಿಯ ಮಾರುಕಟ್ಟೆಯ ಪಕ್ಕದಲ್ಲಿ ಒಳ ರಸ್ತೆ ಹಿಡಿದು ೨೦೦ ಮೀ ಮುಂದಕ್ಕೆ ಹೋದರೆ ಸಿಗುವುದೇ ರಘರಾಜಪುರ್ ಹಳ್ಳಿ. ೧೦೦-೧೨೦ ಸಣ್ಣ ದೊಡ್ಡ ಮನೆಗಳಿರುವ ಈ ಊರಿನ ಪ್ರತಿಯೊಂದು ಮನೆಯಲ್ಲೂ ಕನಿಷ್ಠ ಒಬ್ಬರಾದರೂ ಕಲಾವಿದರು! ಇಡೀ ಊರಿನ ಎಲ್ಲ ಮನೆಗಳ ಗೋಡೆಗಳ ಮೇಲೂ ಸಾಂಪ್ರದಾಯಿಕ ಚಿತ್ರಕಲೆಗಳು! ಕೆಲವರ ಮನೆ ಎಷ್ಟು ಸಣ್ಣದೆಂದರೆ, ಮನೆ ಹೊರಗಿನ ಜಗಲಿಯಲ್ಲೇ ಕಾಲವಸ್ತುಗಳ ನೇತು ಹಾಕಿ ಪ್ರದರ್ಶನಕ್ಕಿಟ್ಟಿರುತ್ತಾರೆ.  ಭಾರತೀಯ ರಾಷ್ಟ್ರೀಯ ರಾಷ್ಟ್ರೀಯ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟ್ಯಾಚ್) ರಘುರಾಜ್ಪುರವನ್ನು ಒಂದು ಪರಂಪರೆ ಗ್ರಾಮವಾಗಿ ಅಭಿವೃದ್ಧಿಪಡಿಸಿದೆ, ' ಹೆರಿಟೇಜ್ ವಿಲೇಜ್' ಎಂದು ಘೋಷಿಸಿದೆ. ಇದನ್ನು ಒಡಿಶಾದ ಪ್ರಾಚೀನ ಗೋಡೆ ವರ್ಣಚ...

ಸೂರ್ಯನಿಗೊಂದು ದೇವಾಲಯ!!

ಇಮೇಜ್
ನಮಗೆಲ್ಲ ಬೆಳೆಗೆದ್ದ ಕೂಡಲೇ ಮನೆಯ ಬಾಗಿಲ ಮುಂದೆ ಹೋಗಿ ಸೂರ್ಯನ ಕಂಡು ನಮಸ್ಕರಿಸಿ ಬರಲು ಚಿಕ್ಕಂದಿನಲ್ಲಿ ಹೇಳಿಕೊಡುತ್ತಿದ್ದರು. ಅದೆಷ್ಟೋ ಸುಂದರ ಸೂರ್ಯೋದಯ, ಸೂರ್ಯಾಸ್ತಗಳನ್ನು ಕಂಡು ಕೊಂಡಾಡಿಯಾಗಿದೆ ಇನ್ನು ಸೂರ್ಯ ನಮಸ್ಕಾರ ಆಸನಗಳ ಅಭ್ಯಾಸ ಇವೆಲ್ಲವೂ ಸಾಮಾನ್ಯ ಬಳಕೆಯಲ್ಲಿದ್ದರೂ, ಸೂರ್ಯನಿಗಾಗಿಯೇ ಬ್ರಹತ್ ದೇವಾಲಯವನ್ನು ಕಾಣುವಾಗ ಮಾತ್ರ ರೋಮಾಂಚವಾದ್ದು ಸುಳ್ಳಲ್ಲ. ಹೀಗೊಂದು ಸೂರ್ಯನ ದೇವಾಲಯಕ್ಕೆ ಭೇಟಿಯ ಅವಕಾಶ ಸಿಕ್ಕಿದ್ದು ನಮಗೆ ನಮ್ಮ ಒಡಿಶಾ ಪ್ರವಾಸದಲ್ಲಿ.. ಕೊನಾರ್ಕ್ ಸೂರ್ಯ ದೇವಾಲಯವಿರುವುದು, ಭಾರತದ ಪೂರ್ವ ಕರಾವಳಿ ಒಡಿಸ್ಸಾದ ಪುರಿಯಲ್ಲಿ.  ಇದು ಯುನೆಸ್ಕೋ ದ ವಿಶ್ವ ಪರಂಪರೆಯಲ್ಲಿ ಪಟ್ಟಿ ಮಾಡಿರುವ ಸುಂದರ ಸಂರಕ್ಷಿತ ತಾಣಗಳಲ್ಲಿ ಒಂದಾಗಿದ್ದು,ಇದು  ತನ್ನ ಸೊಗಸಾದ ಕಳಿಂಗ ವಾಸ್ತು ಶಿಲ್ಪ ಮತ್ತು ಕೆತ್ತನೆಗಳಿಗೆ ಪ್ರಖ್ಯಾತವಾಗಿದೆ. ಸೂರ್ಯನು ಶಕ್ತಿಯ ಸ್ವರೂಪ. ಭಾರತದಲ್ಲಿರುವ ಸೂರ್ಯದೇವನಿಗೆ ಸಮರ್ಪಿತ ಮೂರು ದೇವಾಲಯಗಳ ಪೈಕಿ ಇದು ಒಂದು. ಗುಜರಾತ್ನ ಮೊಧೇರಾ ಸೂರ್ಯ ದೇವಾಲಯ ಮತ್ತು ಕಾಶ್ಮೀರದ ಮಾರ್ಥಾಂಡ ದೇವಾಲಯವು ಕೂಡ ಇದರಷ್ಟೇ ಜನಪ್ರಿಯವಾಗಿದೆ. 12ನೇ ಶತಮಾನದಲ್ಲಿ ನರಸಿಂಹ ದೇವನಿಂದ ಕಟ್ಟಿಸ ಕಟ್ಟಿಸಲ್ಪಟ್ಟ ಈ ದೇವಾಲಯ, ಸಮುದ್ರದ ತುದಿಯಲ್ಲಿದ್ದು ಶಿಥಿಲಗೊಂಡಿದ್ದರೂ ಕೂಡ 2,000 ಕ್ಕೂ ಹೆಚ್ಚು ವರ್ಷಗಳಿಂದ ಸ್ಥಿರವಾಗಿ ನಿಂತಿದೆ. ಭಾರತದ ವಿಶಿಷ್ಟ ದೇವಾಲಯಗಳಲ್ಲಿ ಒಂದಾದ ಈ ದೇವಾಲಯ ವಾಸ್ತವವಾಗಿ ಹೇಳಬೇಕೆಂ...

ಕಂಡೆ ನಾ ಬದರಿಯ..

ಇಮೇಜ್
ಸತತವಾದ ೪ ದಿನಗಳ ವ್ಯಾಲಿ ಆಫ್ ಪ್ಲಾವರ್ಸ್ ಮತ್ತು ಹೇಮಕುಂಡದ ನಮ್ಮ ಚಾರಣ, ಅಂದಿಗೆ ಮುಗಿದಿತ್ತು. ಪಾಂಡುಕೇಶ್ವರದ ಹೋಟೆಲ್ಲಿಗೆ ಬಂದು ವಿಶ್ರಾಂತಿ ತೆಗೆದುಕೊಳ್ಳುವುದಷ್ಟೇ ಆ ದಿನಕ್ಕೆ ನಮಗುಳಿದ ಕೆಲಸ. ನಾವು ಬುಕ್ ಮಾಡಿದ್ದ ಟ್ರೆಕ್ಕಿಂಗ್ ಪ್ಯಾಕೇಜ್ ಏಜೆನ್ಸಿಯವರು, 'ಟೀಮ್ ನ ಇಚ್ಛೆಯಿದ್ದಲ್ಲಿ ಆ ದಿನ ಬದರಿನಾಥ್ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಬಹುದು. ವಾಹನದ ವ್ಯವಸ್ಥೆ ನೀಡಲಾಗುತ್ತದೆ. ಆದರೆ ಪ್ರಯಾಣ ಮಾತ್ರ ಸಂಪೂರ್ಣವಾಗಿ ಹವಾಮಾನದ ಮೇಲೆ ಅವಲಂಭಿತ..'  ಎಂಬ ನಿಯಮಿತ ಒಕ್ಕಣೆಯನ್ನು ಮುಂಚಿತವಾಗಿಯೇ ನೀಡಿದ್ದರು. ಬದರಿನಾಥ್ಗೆ ಹೋಗುವ ಆಶಾಭಾವನೆಯಿಂದ ನಾವೆಲ್ಲರೂ ಘಾನ್ಗ್ರಿಯದಿಂದ ಪುಲ್ನವರೆಗಿನ ನಮ್ಮ ಅವರೋಹಣವನ್ನು ಸಾಧ್ಯವಾದಷ್ಟು ಚುರುಕಾಗಿ ಮುಗಿಸಿ ಬಂದಿದ್ದೆವು. ಬದರಿನಾಥ್ ಗೆ ಹೋಗುವ ಉತ್ಸಾಹ ಯಾರ ಮುಖದಲ್ಲೂ ಚಾರಣದ ಸುಸ್ತನ್ನು ಮೂಡಿಸಿರಲಿಲ್ಲ.. ಆದರೆ,  'ಹಿಂದಿನ ದಿನ ಸುರಿದ ಸತತ ಮಳೆಯ ಕಾರಣದಿಂದಾಗಿ, ಬದರಿನಾಥ್ ಗೆ ಹೋಗುವ ರಸ್ತೆಗಳು ಮುಚ್ಚಿದ್ದು, ೫೦೦ ಕ್ಕೂ ಹೆಚ್ಚು ವಾಹನಗಳು ನಿಲುಗಡೆಯಲ್ಲಿವೆ, ಸಾವಿರಾರು ಭಕ್ತರು ಕಾಯ್ವಿಕೆಯಲ್ಲಿದ್ದಾರೆ, ಯಾವಾಗ ರಸ್ತೆ ತೆರೆಯುವುದೋ ತಿಳಿಯದು, ಹೋಗಿ ನೋಡಬೇಕೀಗ, ' ಎಂದು ನಮ್ಮ ಡ್ರೈವರ್ ಕೊಟ್ಟ ಮಾಹಿತಿಗೆ ಒಮ್ಮೆ ನಿರಾಸೆಯೆನಿಸಿದರೂ, ಭರವಸೆಯನ್ನು ಕಳೆದುಕೊಳ್ಳದೆ ಎಲ್ಲರೂ ಚುರುಕಾಗಿ ಪಾಂಡುಕೇಶ್ವರ್ ಗೆ ಹೊರಟು ಬಂದೆವು. ಪಾಂಡುಕೇಶ್ವರ್ ಸಮೀಪಿಸುತ್ತಿದ್ದಂತೆಯೂ, ...