ಪೋಸ್ಟ್‌ಗಳು

#travelogue ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ರಾಕ್ಷಸಿಗೊಂದು ದೇವಾಲಯ - ಹಡಿಂಬ ದೇವಿ ದೇವಾಲಯ, ಮನಾಲಿ

ಇಮೇಜ್
ಚಂದ್ರಕಾಣಿ ಪಾಸ್ ಚಾರಣದ ನೆಪದಲ್ಲಿ ಕುಲು ತಲುಪಿಯಾಗಿತ್ತು. ಚಾರಣದ ಹಿಂದಿನ acclimatisation ಟ್ರೆಕ್ ದಿನವನ್ನು ಅರ್ಧ ದಿನ ಮುಗಿಸಿ ಇನ್ನರ್ಧ ದಿನ, ೪-೫ ತಾಸುಗಳ ಮಟ್ಟಿಗೆ ಹಿಮಾಚಲ ಪ್ರದೇಶದ ಸುಂದರ ಗಿರಿಧಾಮ ಮನಾಲಿ ಸುತ್ತುವುದು ಎಂಬ ಪ್ಲಾನ್ ಮಾಡಿಕೊಂಡೆವು. ಅಲ್ಲಿ ಭೇಟಿ ನೀಡಬೇಕೆಂದು ಸೂಚಿಸಲಾದ ಸ್ಥಳಗಳು ಹಡಿಂಬ ದೇವಿ ದೇವಾಲಯ ಮತ್ತು ಒಂದಷ್ಟು ಶಾಪಿಂಗ್ಗಾಗಿ ಮಾಲ್ ರೋಡ್ ಸುತ್ತುವುದು ಎಂದು ತಿಳಿಸಿದರು. ಯಾಕೋ ಅನುಮಾನವಾಯಿತು ಮತ್ತೆ ಮತ್ತೆ ಕೇಳಿದೆ. ಮಹಾಭಾರತದಲ್ಲಿ, ಭೀಮ ಮದುವೆಯಾಗಿದ್ದ ಆ  ರಾಕ್ಷಸ ಕುಲದ ಹಿಡಿಂಬೆಗೆ ದೇವಸ್ಥಾನವೇ ? ಎಂದು ಎರಡು-ಮೂರು ಗೈಡ್ ಗಳನ್ನು ಕೇಳಿದೆ. ಹೌದು ಹೌದು ಎಂದರು. ೧೪ ವರ್ಷಗಳ ಹಿಂದೊಮ್ಮೆ ಮನಾಲಿಗೆ ಬಂದಿದ್ದಾಗ ವಿಷ್ಣುವಿನ ದೇವಾಲಯದಕ್ಕೆ ಭೇಟಿ ನೀಡಿದ್ದೆವು, ಈ ದೇವಾಲಯದ ಬಗ್ಗೆ ಕೇಳಿರಲಿಲ್ಲ. ಆಶ್ಚರ್ಯವಾಯಿತು.  ೧೨ನೇ ಮೈಲು ಎಂಬ ಊರಿಂದ ಸ್ಥಳೀಯ ಬಸ್ಸಿನಲ್ಲಿ ಪ್ರಯಾಣ. ೩೦ ನಿಮಿಷಕ್ಕೆಲ್ಲ ಮನಾಲಿಯಲ್ಲಿದ್ದೆವು. ಸ್ಥಳೀಯ ಬಸ್ಸುಗಳಲ್ಲಿ ಕೇಳಸಿಗುವ ಅಲ್ಲಿಯ  ಜನರ ಪಹಾಡಿ ಭಾಷೆ, ಡ್ರೈವರುಗಳ ಜೊತೆ ಮಾತುಕತೆ ಎಲ್ಲವೂ ಮಜಾ ಕೊಡುತ್ತದೆ. ಹಿಮಾಲಯ ಪರ್ವತಗಳ ನಡುವೆ ಇರುವ ಸುಂದರ ಗಿರಿಧಾಮ ಮನಾಲಿ.  ಜೂನ್ ತಿಂಗಳು, ಚುಮು ಚುಮು ಚಳಿ, ತುಂತುರು ಮಳೆ. ಪ್ರವಾಸೋದ್ಯಮವೇ ಮುಖ್ಯ ಆದಾಯವಾದ ಮನಾಲಿ ಒಂದು ಚಿಕ್ಕ ಊರು. ನಮಗೆ ಮನಾಲಿ ೧೪ ವರ್ಷಗಳ ನಂತರ ಎರಡನೇ ಸಲ ನೋಡುತ್ತಿರುವ ಅನುಭವ...

ಕೈವಾರ ಬೆಟ್ಟ ಮತ್ತು ಕೈಲಾಸಗಿರಿ ಗುಹೆ

ಇಮೇಜ್
ಬೆಂಗಳೂರಿನಿಂದ ೬೫ ಕಿಮೀ ದೂರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿದೆ ಕೈವಾರವೆಂಬ ಊರು. ಆಸ್ತಿಕರಿಗೆ ಇದೊಂದು ಪುಣ್ಯಕ್ಷೇತ್ರ, ಚಾರಣಿಗರಿಗೆ ಮತ್ತೊಂದು ಸ್ವರ್ಗ.  ಕರ್ನಾಟಕ ಅರಣ್ಯ ಇಲಾಖೆಯವರ ನಿರ್ವಹಣೆಯಲ್ಲಿರುವ ಇಲ್ಲಿನ ಕೈವಾರ ಬೆಟ್ಟಕ್ಕೆ ಟ್ರೆಕಿಂಗ್ ಹೋಗಲು ಮುಂಚಿತವಾಗಿ ಅನುಮತಿ ಪಡೆಯಬೇಕಾಗುತ್ತದೆ. karnatakatourism.org   ನಲ್ಲಿ ಕೂಡ ಆನ್ಲೈನ್ ಟಿಕೆಟ್ ಬುಕಿಂಗ್ ಮಾಡಬಹುದು. ಬೆಂಗಳೂರಿನಿಂದ ಹೊರಟು ಹೊಸಕೋಟೆ ಮಾರ್ಗವಾಗಿ ಅಥವಾ ದೇವನಹಳ್ಳಿ-ಬಿಜಯಪುರ ಮಾರ್ಗವಾಗಿ ಬಸ್ಸು ಅಥವಾ ಸ್ವಂತ ವಾಹನದಲ್ಲಿ ಕೈವಾರವನ್ನು ತಲುಪಬಹುದು. ನಾವು ಹೋದದ್ದು ನಮ್ಮ ಯೋಗ ಶಿಕ್ಷಣ ಕೇಂದ್ರದ ವತಿಯಿಂದ, ಸಂಚಾರದ ವ್ಯವಸ್ಥೆ, ಊಟ ತಿಂಡಿಗಳ ವ್ಯವಸ್ಥೆ ಮುಂಚಿತವಾಗಿಯೇ ನಮ್ಮ ತಂಡದ ನೇಕಾರರಿಂದ ಆದ್ದ ಕಾರಣ, ನಮಗೆ ಹೆಚ್ಚಿನ  ನಿರ್ವಹಣಾ ಜವಾಬ್ಧಾರಿ ಬೀಳಲಿಲ್ಲ. ಚಾರಣ ಯೋಗಬಂಧುಗಳ ಜೊತೆಯಾದ್ದರಿಂದ ದೇಹದ ಸ್ನಾಯುಗಳನ್ನು ಚಲನಶೀಲವಾಗಿರಿಸಲು ಆಸಕ್ತಿ ಹೊಂದಿರುವ ಸಮಾನ ಮನಸ್ಕರರ ಗುಂಪು ದೊರೆತಂತಾಗಿತ್ತು. ಇದರ ಜೊತೆಯಲ್ಲಿ, ಈ ಸ್ಥಳದ ಮಹಿಮೆಯನ್ನು ಅತ್ಯಂತ ನಿಖರವಾಗಿ ಬಲ್ಲವರಾದ ನಮ್ಮ ಗುರುಗಳಾದ ಸುಬ್ಬು ಬೈಯ್ಯ ಮತ್ತು ಅಶೋಕ್ ಸರ್ ನ ನೇತೃತ್ವದ ಯೋಗಯಾತ್ರೆ ಇದಾದ್ದರಿಂದ, ಸ್ಥಳ ಮಹಿಮೆಯನ್ನು ವಿಸ್ತಾರವಾಗಿ ತಿಳಿಯಲು ಇನ್ನಷ್ಟು ಸಹಾಯಕವಾಯಿತು. ಈ ಸ್ಥಳ ಸಂತ ಕೈವಾರ ತಾತಯ್ಯ ಆಶ್ರಮ ಮತ್ತು ದೇವಾಲಯದ ಸಂಕೀರ್ಣಕ್ಕೆ ಹೆಸ...