ಪೋಸ್ಟ್‌ಗಳು

ಪ್ರಕಟಿತ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

'ವ್ಯಾಲಿ ಆಫ್ ಫ್ಲವರ್ಸ್'

ಇಮೇಜ್
ಅಲ್ಲಿ ನಿಂತು ನೋಡಿದರೆ, ೩೬೦ ಡಿಗ್ರಿ ಸುತ್ತಲೂ ಆವರಿಸಿದ ಮಂಜಿನ ಬೆಟ್ಟಗಳ ಸಾಲು,ಅದರಾಚೆಗೆ ಹಿಮ ಹೊತ್ತ ರುದ್ರ ರಮಣೀಯ ಪರ್ವತ,  ಹಿ ಮ ಕರಗಿ ನೀರಾಗಿ, ಕಾಲ್ಬದಿಗೆ ಹರಿವ ಸಣ್ಣ ತೊರೆ, ಅಲ್ಲೇ ಪಕ್ಕದ ಹಚ್ಚ ಹಸಿರ ಬೆಟ್ಟದಿಂದ ದುಮ್ಮಿಕ್ಕುವ ಬೆಳ್ನೊರೆಯ ಜಲಪಾತ, ನೀಲಾಕಾಶ, ಬಿಳಿ ಮೋಡಗಳ ಚಿತ್ತಾರ.. ಸೂರ್ಯ ನೆತ್ತಿ ಮೇಲಿದ್ದರೂ ಮೈಸೋಕುವ ತಂಗಾಳಿ ,  ಇದೆಲ್ಲದರ ಮಧ್ಯೆ  ಭೂಮಿಯ ಮೇಲೆ ಪುಷ್ಪ ವೃಷ್ಟಿಯಾಗಿದೆಯೇನೋ ಎಂದು ಭಾಸವಾಗುವಂತೆ  ಆ ಹುಲ್ಲುಗಾವಲಿನ ಕಣಿವೆಯ  ತುಂಬಾ ಕಣ್ಣು ಹಾಯಿಸಿದಷ್ಟು ದೂರಕ್ಕೂ  ಬಣ್ಣ ಬಣ್ಣದ ಹೂಗಳ ಹಾಸು..!! ಇಂತದ್ದೊಂದು ಸಮ್ಮೋಹನಗೊಳಿಸುವಂತಹ  ನೈಸರ್ಗಿಕ ಸೌಂದರ್ಯ ಕಾಣಸಿಗುವುದು, ಉತ್ತರಾಂಚಲದ ಪ್ರಸಿದ್ಧ ಚಾರಣ ಸ್ಥಳ 'ವ್ಯಾಲಿ ಆಫ್ ಫ್ಲವರ್ಸ್' ನಲ್ಲಿ.   ವ್ಯಾಲಿ ಆಫ್ ಫ್ಲವರ್ಸ್ ನಲ್ಲೇನಿದೆ ?  ವ್ಯಾಲಿ ಆಫ್ ಫ್ಲವರ್ಸ್  ಪ್ರಾರಂಭಿಕ ಹಂತದ ಪರ್ವತಾರೋಹಣರಿಗೆ ಹೇಳಿ ಮಾಡಿಸಿದಂತಹ ಚಾರಣ.  ಜೂನ್ ತಿಂಗಳಿನಿಂದ ಪ್ರಾರಂಭವಾಗಿ ಅಕ್ಟೊಬರ್ ಕೊನೆಯವರೆಗೂ ಮಾತ್ರ ಟ್ರೆಕಿಂಗ್ ಮಾಡಬಹುದಾದ ಈ ಸ್ಥಳಗಳು, ನಂತರದ ೬ ತಿಂಗಳು ಸಂಪೂರ್ಣ ಹಿಮಾವೃತ್ತವಾಗುತ್ತದೆ.  ಸಮುದ್ರ ಮಟ್ಟಕ್ಕಿಂತ ೧೨೦೦೦ ಅಡಿಗಳಷ್ಟು ಎತ್ತರದಲ್ಲಿರುವ ವ್ಯಾಲಿ ಆಫ್ ಫ್ಲವರ್ ಕಣಿವೆಯು ದಟ್...

ಮದುವೆಮನೆ ಮತ್ತು ಕಾಲಮಾನ

ಇಮೇಜ್
ಈಗ ಊರ ಕಡೆ ಶುಭಕಾರ್ಯಗಳ ಸೀಸನ್. ಕರುಳು ಬಳ್ಳಿ, ನೆಂಟರಿಷ್ಟರು, ಆತ್ಮೀಯರು, ಸ್ನೇಹಿತರ ಮನೆಗಳಿಂದ ಹತ್ತು ಹಲವು ಕಾರ್ಯಕ್ರಮಗಳ ಆಹ್ವಾನದ ಮಹಾಪೂರವೇ ಇರುತ್ತದೆ.ನಮ್ಮಂತಹ ನಗರವಾಸಿಗರಿಗೆ, ವೃತ್ತಿಪರರಿಗೆ ಕೆಲಸಕ್ಕೆ ಮಧ್ಯೆ ಮಧ್ಯೆ ಪಡೆಯಬಹುದಾದ ರಜೆ, ಜೀವನೋಪಾಯಕ್ಕೆ ನಡೆಸುತ್ತಿರುವ ಬಿಸಿನೆಸ್ ನ ಮಾರ್ಕೆಟಿಂಗ್ ಅನುಕೂಲ/ಅನಾನುಕೂಲಗಳು, ಮಕ್ಕಳ ಶಾಲಾ-ಕಾಲೇಜು  ಪಠ್ಯೇತರ ಕ್ಲಾಸುಗಳು ಎಲ್ಲವನ್ನೂ ಪರಿಗಣಿಸಿಕೊಳ್ಳಬೇಕಾದ ಪರಿಸ್ಥಿತಿ. ಸಮಾಜದ ಕಟ್ಟುಪಾಡು, ಇರುವ ಅಲ್ಪಸ್ವಲ್ಪ ಭಾಂದವ್ಯಕ್ಕೆ ಗೌರವವಿಟ್ಟು, ಸಲಿಗೆಗೆ ಕಟ್ಟುಬಿದ್ದು, ಒಂದು ದಿನದ ಮಟ್ಟಿಗೆ ಊರಿಗೆ ಹೋಗಿ ಕಾರ್ಯಕ್ರಮಗಳನ್ನು ಮುಗಿಸಿ ಸಂಜೆಗೆ ವಾಪಸು ಬಸ್ಸು ಹತ್ತಿ ಮರುದಿನದ ಕರ್ತವ್ಯಕ್ಕೆ ಹಾಜಾರಾಗುವ ಅನಿವಾರ್ಯತೆ ಒಂದು ಕಡೆಯಾದರೆ, ಕೆಲವೊಮ್ಮೆ ಆಹ್ವಾನ ನೀಡಿದವರು ತಮಗೆ ಎಷ್ಟು ಮುಖ್ಯ/ಅಮುಖ್ಯರು, ಆಹ್ವಾನವಿರುವ ಕಾರ್ಯಕ್ರಮದ ಸ್ಥಳವನ್ನು ತಲುಪಲು ತಾವು ವ್ಯಯಿಸಬೇಕಾದ ಶ್ರಮ ಸಮಯ ಎಂಬಿತ್ಯಾದಿ ಜರಡಿ ಹಿಡಿದು, ಕಡೆಗೆ ನಮ್ಮದು ಬ್ಯುಸಿ ಲೈಫ್ ಎಂಬ ಮುಸುಕಣ್ಣೆಳೆದುಕೊಂಡು ಬರಲಾಗುವುದಿಲ್ಲ ಎಂದು ಫೋನಿನಲ್ಲೇ ಶುಭಾಶಯ ಕೋರಿ ಮದುವೆ ಸಮಾರಂಭ ಸಮಾಪ್ತಿಗೊಳಿಸುವುದು ಇತ್ತೀಚಿನ ಇನ್ನೊಂದು ಬಗೆಯ ಬಾಳರೀತಿಯಾಗುತ್ತಿದೆ. ಇದು ಕೇವಲ ನಗರ ಪ್ರದೇಶದವರಿಗೆ ಮಾತ್ರ ಸೀಮಿತವಾಗಿಲ್ಲ. ನಾವೇ ಕಾಣುವಂತೆ ಇತ್ತೀ...

ಪುರ ಲುಹುರ್ ಉಲುವಾಟು, ಬಾಲಿ

ಇಮೇಜ್
ಅದೊಂದು ದ್ವೀಪದ ತುತ್ತತುದಿ. ಅಲ್ಲಿದೆ ಒಂದು ಸಮುದ್ರ ಮಟ್ಟಕ್ಕಿಂತ ಸಾಕಷ್ಟು ಎತ್ತರದಲ್ಲಿರುವ  ಬ್ರಹತ್ ಕಡಿಬಂಡೆ. ಅದರ ಮೇಲೆ, ಮನಸ್ಸು ಪ್ರಫುಲ್ಲಗೊಳ್ಳುವಂತಹದೊಂದು ದೇವಾಲಯ. ದೇವಾಲಯದಾಚೆಗೆ ಕಣ್ಣು ಹಾಯಿಸಿದಷ್ಟು ದೂರವೂ, ಮುಗಿಯದ ಸಾಗರದ ತುಂಬು ನೋಟ. ಕೆಳಗಡೆ ನಿರಂತರವಾಗಿ ಬಂಡೆಗೆ ಬಂದಪ್ಪಳಿಸುವ ಶುಭ್ರ ಅಲೆಗಳ ಮೋಹಕ ಆಟ. ಕಿವಿಗೊಟ್ಟು ಆಲೈಸಲು, ತನ್ನತಾನದಲಿ ಶಬ್ದ ಮಾಡುವ ನೀಲ ಶಾಂತ ಅಲೆಗಳ ಹೊಯ್ದಾಟ.. ಅಲ್ಲೆಲ್ಲೋ ಆಗಾಧ ಸಾಗರದ ಮಧ್ಯದಲ್ಲಿ ಸಣ್ಣ ಬಿಳಿ ಹರಳಿನಂತೆ ಕಂಡು, ಕ್ರಮೇಣ ಪುಟ್ಟ ಚುಕ್ಕೆಯಂತೆ ಮಾಯವಾಗುವ ಹಡಗು. ಸೂರ್ಯ ತಂಪಾಗುವ ಸಮಯಕ್ಕೆ, ಆಕಾಶದ ತುಂಬೆಲ್ಲ ರಂಗಿನ ಕೆಂಬಣ್ಣ; ಅದನ್ನು ಪ್ರತಿಫಲಿಸುವ ಸಮುದ್ರವೋ ಬಂಗಾರದ ಬಣ್ಣ.. ಸಂಜೆಯ ತಣ್ಣನೆ ಬೀಸುವ ಗಾಳಿಗೆ ಮೈ ಒಡ್ಡಿ ನಿಂತರೆ ಸಾಕು, ನಮ್ಮ ಸುತ್ತಮುತ್ತಲು ನಮ್ಮಂತೆಯೇ ಸಾವಿರಾರು ವೀಕ್ಷಕರಿದ್ದರೂ, ಆ ಸ್ಥಳದ ಸೌಂದರ್ಯಕ್ಕೆ ಮನಸೋತು ನಮ್ಮ ಉಪಸ್ಥಿತಿಯೇ ಮರೆಯುವಂತಹ ಅನುಭಾವ.. ದಿಗಂತದಂಚಿನಲ್ಲಿ ಅಸ್ತಮಿಸುವ ದಿನಕರನನ್ನು ಮನದಣಿಯೆ ನೋಡುವಾಗ, ಮಹಾಸಾಗರದ ಅಲೆಗಳ ನಿನಾದವನ್ನು ಆಲೈಸುವಾಗ, ಪ್ರಕೃತಿಯೇ ದೈವವೆಂದು ಆರಾಧಿಸುವ ದೇಗುಲದ ಶಕ್ತಿ ತರಂಗಗಳನ್ನು ಅನುಭವಿಸುವಾಗ ಉಂಟಾಗುವ ವಿಸ್ಮಿತ ಮೌನ ಮತ್ತು ಈ ಎಲ್ಲ ಚೆಲುವನ್ನು ಹೀರಿಕೊಂಡು ಮನಸ್ಸಿಗೆ ಸಿಗುವ...

ಅಡುಗೆ ಸಂಭ್ರಮ

ಇಮೇಜ್
ನಾನು ನಮ್ಮ ಮನೆಯಲ್ಲಿನ ಮುದ್ದಿನ ತನುಜೆ, ಅಕ್ಕನ ಅನುಜೆ. ಚಿಕ್ಕಂದಿನಲ್ಲಿ ಅಮ್ಮ ಎಲ್ಲಾದರೂ ಹೊರಗಡೆ ಹೋದರೆ ಅಪ್ಪಾಜಿಯ ನಳಪಾಕ, ಅಪ್ಪಾಜಿಯೂ ಇಲ್ಲದಿದ್ದ ಪಕ್ಷದಲ್ಲಿ ಅಕ್ಕನ ಅಡುಗೆ ಪ್ರಯೋಗಗಳಿಂದ ನನ್ನ ಹೊಟ್ಟೆ ತುಂಬಿಸಿಕೊಳ್ಳಲು ಯಾವ ಕೊರತೆಯೂ ಆಗುತ್ತಿರಲಿಲ್ಲ. ಇದೆ ಕಾರಣಕ್ಕೋ ಏನೋ ಸುಮಾರು ೭-೮ ನೇ ತರಗತಿಗೆ ಬರುವ ವರೆಗೂ ಅಡುಗೆ ತಯಾರಿಸಲು ಸಹಾಯ ಮಾಡುವ ಕೆಲಸ ಮಾಡಿದ್ದಿದ್ದರೂ, ನಾನಾಗಿಯೇ ಯಾವುದೇ ಮುಖ್ಯ ಅಡುಗೆ ತಯಾರಿಸುವ ಗೋಜಿಗೆ ಹೋಗಿಯೇ ಇರಲಿಲ್ಲ. ಹಾಗೊಂದು ದಿನ ಅಪ್ಪಾಜಿ ಅಮ್ಮ ಕಡೆಗೆ ಅಕ್ಕನೂ ಮನೆಯಲ್ಲಿರದ ದಿನ. ಅಂದು ಗೆಳತಿಯೊಬ್ಬಳನ್ನು ಮನೆಗೆ ಕರೆತಂದಿದ್ದೆ. ಮನೆಯಲ್ಲಿ ಅಮ್ಮ ಅಡುಗೆ ತಯಾರಿಸಿಟ್ಟಿದ್ದರೆಂಬ ನೆನಪು. ಯಾವುದೋ ಮಾತಿನ ಮಧ್ಯೆ ಗೆಳತಿಯು ತನಗೆ ಅಲ್ಪಸ್ವಲ್ಪ ಪದಾರ್ಥಗಳನ್ನು ಮಾಡಲು ಬರುತ್ತದೆ ಎಂದು ತನ್ನ ಬಗ್ಗೆ ಹೇಳಿಕೊಂಡಾಗ, ನನ್ನ ಬಗ್ಗೆ ನನಗೆ ಸಂಕೋಚವೆನಿಸಿತು. ನಂತರಕ್ಕೆ, ಅದೆಲ್ಲಿಂದ ಬಂದ ಶೂರತನವೋ ತಿಳಿಯದು, "ನೀನು ನನಗೆ ಗೈಡ್ ಮಾಡು , ನಾನು ಪದಾರ್ಥ ತಯಾರು ಮಾಡುತ್ತೇನೆ" ಎಂದು ಅವಳಲ್ಲಿ ಕೇಳಿಕೊಂಡು, ಬದನೆ ಮತ್ತು ಬೆಳ್ಳುಳ್ಳಿ ಹಾಕಿ ಕಾಯಿ ಗೊಜ್ಜು ಮಾಡುವ ಪ್ಲಾನ್ ಮಾಡಿದೆವು. ತೆಂಗಿನ ತುರಿ ಸಿದ್ಧವಾಯಿತು. ಬದನೇಕಾಯಿ ಪಾತ್ರೆಯಲ್ಲಿಟ್ಟು ಬೇಯಿಸಿಕೊಂಡಿದ್ದಾಯಿತು. ಬೆಳ್ಳುಳ್ಳಿ ತಂದು ಬಿಡಿಸಿಕೊಂಡಿದ್ದಾಯಿತು. ಏನೂ ಅಡುಗೆ ಬಾರದ ನಾನು, ಚಿಟಿಕೆ ಉಪ್ಪಿಗೂ  ಗೆಳತಿಯ ಸೂಚನೆಗಳನ್ನು ತೆಗೆದ...

ಮಂಡಲದ ಸುತ್ತ..

ಇಮೇಜ್
ಇದೇನ್ರೀ ಮಂಡಲ ಎಂದರೆ? ಅಲ್ಲಿ ಇಲ್ಲಿ ಸುಮ್ಮನೆ ಏನೋ ಒಂದಷ್ಟು ಡಿಸೈನ್ ಮಾಡಿಕೊಂಡು, ರಂಗೋಲಿ ತರ ಚಿತ್ರ ಬಿಡಿಸಿ ಅದಕ್ಕೊಂದಷ್ಟು ಬಣ್ಣ ತುಂಬೋದ್ರಲ್ಲೇನಿದೇರೀ ದೊಡ್ಡ ವಿಶೇಷ ಎಂದಿರಾ?? ಕೇವಲ ಚಿತ್ರಗಳ ರೂಪದಲ್ಲಿಯೇ ಅದಮ್ಯವಾದ ಶಕ್ತಿಯನ್ನು ತುಂಬುವ, ನವ ಚೈತನ್ಯದ ರೂಪವಾದ ಮಂಡಲಗಳ ಬಗ್ಗೆ ಸ್ವಲ್ಪ ತಿಳಿಯೋಣ ಬನ್ನಿ..  ಮಂಡಲಗಳೆಂದರೆ ಅದೊಂದು ಕೇವಲ ಕೈಬರಹವಲ್ಲ ಅಥವಾ ಪೈಂಟ್ ಬ್ರಶ್ ನಿಂದ ಒಟ್ಟಾರೆಯಾಗಿ ಗೀಚಿ ರಚಿಸಿದ ಚಿತ್ರಪಟವಲ್ಲ. ಅದೊಂದು ಧ್ಯಾನ. ಹಾಂ! ಹೌದಾ..! ಧ್ಯಾನ ಎಂದರೆ ನಿಶ್ಯಬ್ಧವಾಗಿ ಕುಳಿತು ಏನೂ ಮಾಡದೆ ಅಥವಾ ಒಂದಷ್ಟು ಮಂತ್ರಗಳನ್ನುಚ್ಛರಿಸುತ್ತಾ ದೇವರ ಸ್ತುತಿಸುವ ಬಗೆ ಗೊತ್ತು.. ಚಿತ್ರ ಬರ್ಕೊಂಡು ಧ್ಯಾನ ಮಾಡೋದು..ಇದ್ಯಾವ ಬಗೆಯ ಹೊಸ ಅವತಾರ ಎಂದು ಕೇಳಿದೀರಾ? ನಮ್ಮದೇ ಚಿತ್ರಕಲೆಯಿಂದ ಮನಸ್ಸನ್ನು ಒಂದೆಡೆ ಕೇಂದ್ರೀಕೃತಗೊಳಿಸುವಲ್ಲಿ ಅಥವಾ ಒಂದು ಚಿತ್ರಪಟವನ್ನು ಕಂಡು ದೇಹ ಮತ್ತು ಮನಸ್ಸಿನಲ್ಲಿ ಚೈತನ್ಯ ಮೂಡುವಂತಾದರೆ, ಋಣಾತ್ಮಕ ಆಲೋಚನೆಗಳು ದೂರವಾಗಿ, ನಮ್ಮೊಳಗೇ ಇರುವ ಧಾರಣಶಕ್ತಿಯ ಅರಿವು ನಮಗೆ ಸಿಗುವಂತಾದರೆ, ಅದೇ ಧ್ಯಾನವೆನಿಸಿಕೊಳ್ಳುವುದಿಲ್ಲವೇ? ಸಂಸ್ಕೃತದಲ್ಲಿ ''ಮಂಡ' ಎಂದರೆ ಅಲಂಕರಿಸುವುದು ಅಥವಾ ಸಿದ್ಧಗೊಳಿಸುವುದು ಎಂದರ್ಥ. ಲ ಎಂಬ ಅಂತ್ಯಪ್ರತ್ಯಯ ದೊಂದಿಗೆ, ಮಂಡಲ ವೆಂದರೆ ಒಂದು ಪವಿತ್ರವಾದ ವರ್ತುಲ ...

ಕ್ವಿಲ್ಲಿಂಗ್ ಎಂಬ ಕೌಶಲ್ಯದ ಗರಿ

ಇಮೇಜ್
ಒಂದಷ್ಟು ವರ್ತುಲ, ಒಂದಷ್ಟು ತ್ರಿಭುಜ, ಮತ್ತೊಂದಷ್ಟು ಚೌಕ, ಆಯತ..ಒಮ್ಮೆ ಒತ್ತೊತ್ತಾಗಿ ಸುತ್ತಿಕೊಳ್ಳುವ ಬಿಗುಮಾನ, ಮತ್ತೊಮ್ಮೆ ಉದುರುದುರಾಗಿ ಅರಳಿಕೊಳ್ಳುವ ಸೌಂದರ್ಯ..ಒಮ್ಮೆ ಒಪ್ಪ ನೇರದ ದಿಟ್ಟೆ, ಮತ್ತೊಮ್ಮೆ ನಸು ನಾಚುವ ಓರೇ..ಬಳುಕಿನ ಬಳ್ಳಿಯಾಗಿ, ಮಿನುಗುವ ನಕ್ಷತ್ರವಾಗಿ, ಪ್ರೀತಿ ಹುಟ್ಟಿಸುವಂತಹ ಹೃದಯವಾಗಿ..ಹೀಗೆ ಸಾಗುತ್ತದೆ, ಕಾಗದವರಳಿ ಹೂವಾಗುವ ಕಥೆ.. ಬಣ್ಣ ಬಣ್ಣದ ತೆಳ್ಳನೆಯ ಪೇಪರ್ರಿನ ಪಟ್ಟಿಗಳು, ಸರ ಸರನೆ ಆಡಿಕೊಂಡು ಸುರುಳಿಯಾಗಿ ಸುತ್ತಿಕೊಂಡು, ನಮ್ಮ ಕೈಬೆರಳುಗಳ ಹಿತಸ್ಪರ್ಶಕ್ಕೊಳಗಾಗಿ ಮೆದುವಾಗಿ ಒತ್ತಿಸಿಕೊಂಡು, ವೈಯಾರದ ಆಕೃತಿಯನ್ನು ತಾಳಿ, ಅಂತಿಮವಾಗಿ ಅಂಟಿನೊಡನೆ ತನ್ನನ್ನು ತಾನೇ ಹೊಂದಿಸಿಕೊಂಡು ಕ್ಷಣಮಾತ್ರದಲ್ಲಿ ಸುಂದರ ಕಲಾಕೃತಿಯಾಗಿ ಅರಳಿಕೊಳ್ಳುವ ಒಂದು ಸುಂದರ ಮಾಯೆಯೇ ಕ್ವಿಲ್ಲಿಂಗ್ ಎಂಬ ಚಿತ್ತಾರ. ಈ ಕಲೆಯ ಸೃಷ್ಟಿಯ ಹಿಂದೆಯೂ ಒಂದು ರೋಚಕ ಕಥೆಯಿದೆ.ಇದೊಂದು ಒಟ್ಟಾರೆಯಾಗಿ ಹುಟ್ಟಿದ ಕುಶಲ ಕಲೆ. ಫ್ರಾನ್ಸ್ ಮತ್ತು ಇಟಲಿಯಲ್ಲಿ ಮೊಟ್ಟ ಮೊದಲು ಪ್ರಾರಂಭವಾದ ಕ್ವಿಲ್ಲಿಂಗ್ ಅಲ್ಲಿನ ಸನ್ಯಾಸಿನಿಯರು ತಾವು ಪುಸ್ತಕದ ಮೇಲ್ಪದರವನ್ನು ಮಡಚಿ ಹಾಕುವಾಗ, ಹೆಚ್ಚಾಗಿ ಉಳಿದು ಹರಿದ ನಿರುಪಯುಕ್ತ ಉದ್ದದ ಕಾಗದಗಳನ್ನು ಸುಮ್ಮನೆ ಸುರುಳಿಯಾಗಿಸಿ ಮಡಚಲಾರಂಭಿಸದರಂತೆ. ಅದರಿಂದ ದೊರೆತ ವಿನೂತನ ಸ್ವರೂಪದಿಂದ ಆಕರ್ಷಿತರಾಗಿ, ತಮ್ಮ ಗ್ರಂಥ ಪುಸ್ತಕಗಳ ಮೇಲಪುಟಗಳಿಗೆ ಅಲಂಕರಿಸಿ ಸಂಭ್ರಮಿಸಿದರಂತೆ. ಜೊತೆಗೆ ಇನ್ನಷ್ಟ...

ರಜೆ ಎಂದರೆ ಸಮಯದ ಸದುಪಯೋಗ

ಇಮೇಜ್
ಮಕ್ಕಳಿಗೆ ಪರೀಕ್ಷೆಗಳು ಮುಗಿದವು, ಇನ್ನು ಸಾಕಷ್ಟು ದಿನ ಬೇಸಿಗೆ ರಜೆ, ಮಕ್ಕಳು ಸ್ವಲ್ಪ ರೆಸ್ಟ್ ಮಾಡ್ಲಿ, ಅವರಿಗೆ ಬೇಕಾದ್ದನ್ನು ಮಾಡಿಕೊಳ್ಳಲಿ, ಊಟ ತಿಂಡಿಗೊಂದು ಬಂದರೆ ಸಾಕು ಎಂಬುದು ಸಾಮಾನ್ಯವಾಗಿ ನಾವು ಪೋಷಕರ ಮನಸ್ಸಿನಲ್ಲಿ ಬರುವ ವಿಚಾರ.  ಆದರೆ ಈ ಬೇಸಿಗೆ ರಜೆ ಯ ನಿಜವಾದ ಅರ್ಥವೇನು? ಮಕ್ಕಳು ಇದರ ಸದುಪಯೋಗ ಮಾಡಿಕೊಳ್ಳುವ ವಿಧಾನಗಳೇನು? ನಾವು ಹೇಗೆ ನಮ್ಮ ಮಕ್ಕಳಿಗೆ ರಜೆಯ ಸದುಪಯೋಗದ ಬಗ್ಗೆ ಮಾಹಿತಿ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡಬಹುದು ಎಂದುದರ ಕುರಿತು ಇಲ್ಲಿದೆ ಒಂದು ಸಮಗ್ರವಾದ ಟಿಪ್ಪಣಿ. ರಜೆ ಎಂದರೆ ವಿಶ್ರಾಂತಿ ಎಂದರ್ಥವಲ್ಲ. ರಜೆ ಎಂದರೆ ನಮ್ಮ ನಿತ್ಯ ಚಟುವಟಿಕೆಗಳಿಗಿಂತ, ಸ್ಥಿತ ಜೀವನ ಶೈಲಿಗಳಿಂದ ಸ್ವಲ್ಪ ಭಿನ್ನವಾಗಿ, ಮನಸ್ಸಿಗೆ ಖುಷಿಯೆನಿಸಿದ್ದನ್ನು,  ಉಪಯುಕ್ತವಾದ್ದನ್ನು, ಅಪೂರ್ಣವಾಗಿಟ್ಟುಕೊಂಡ ಕಾರ್ಯಗಳನ್ನು ಅನುಕೂಲಕ್ಕೆ ತಕ್ಕಂತೆ ಮಾಡಿಕೊಳ್ಳುವುದು ಎಂದೂ ಅರ್ಥೈಸಬಹುದು. ಒಂದೇ ಮಾತಿನಲ್ಲೇ ಹೇಳುವುದಾದರೆ ರಜೆ ಎಂದರೆ, ಸಿಕ್ಕಿರುವ ಬಿಡುವಿನ ಸಮಯದ ಸದುಪಯೋಗ. ವಾಸ್ತವವಾಗಿ, ರಜೆ ಬಂದರೆ, ಮಕ್ಕಳು ಆ  ವರೆಗೆ ಒಗ್ಗಿಕೊಂಡ ಶಾಲೆ, ಶಿಕ್ಷಣ, ಹೊಂವರ್ಕ್, ಪರೀಕ್ಷಾ ಸಮಯದಲ್ಲಿ ಮಾಡಬೇಕಾಗುವ ಹೆಚ್ಚಿನ ತಯಾರಿ ಇತ್ಯಾದಿ ಶೈಕ್ಷಣಿಕ ಚಟುವಟಿಕೆಗಳಿಂದ ಹೊರಬಂದು, ತಮಗಿಷ್ಟವಾದ್ದನ್ನು ಮಾಡಿಕೊಂಡು, ಸ್ನೇಹಿತರೊಡನೆ ಹೆಚ್ಚಿನ ...

ಉಡುಗೊರೆ ನೀಡುವ ಮುನ್ನ

"ವಸಂತ ಮಾಸ ಬಂದಾಗ ಮಾವು ಚಿಗರಲೇ ಬೇಕು, ಕೋಗಿಲೆ ಹಾಡಲೇ ಬೇಕು, ಕಂಕಣ ಕೂಡಿ ಬಂದಾಗ ಮದುವೆಯಾಗಲೇ ಬೇಕು.... " ಎಂದು ನನಗರಿವಿಲ್ಲದಂತೆಯೇ ಹಾಡು ಗುನುಗುತ್ತಲಿತ್ತು ಕೈಯಲ್ಲಿದ್ಯಾವುದೋ ಮದುವೆ ಆಮಂತ್ರಣ ಪತ್ರಿಕೆಯನ್ನು ನೋಡಿ.. ಹೌದು! ಈಗೆಲ್ಲ ಮಂಗಳ ಕಾರ್ಯಗಳು ನಡೆಯುವ ಸಕಾಲ... ಆಮಂತ್ರಣ ಪಡೆದ ನಮಗೂ ಅತಿಥಿಗಳಾಗಿ ಇಂತಹ ಕಾರ್ಯಕ್ರಮಗಳಿಗೆ ಭಾಗವಹಿಸುವುದು, ತುಂಬಾ ಹತ್ತಿರದ ಕೌಟುಂಬಿಕ ಕಾರ್ಯಕ್ರಮಗಳಾಗಿದ್ದರೆ ಮನೆಯವರಾಗಿ ಅವುಗಳ ಸಡಗರ - ಸಂಭ್ರಮಗಳಲ್ಲಿ ಪಾಲ್ಗೊಳ್ಳುವುದು ಎಲ್ಲವೂ ನಡೆದೇ ಇರುತ್ತದೆ. ಇವೆಲ್ಲದರ ಜೊತೆಗೆ, ಕಾರ್ಯಕ್ರಮಗಳಲ್ಲಿ, ಉಡುಗೊರೆ ನೀಡುವುದು ಕೂಡ ನಮ್ಮಲ್ಲಿ ಹಿಂದಿನಿಂದಲೂ ನಡೆದು ಬಂದ ಪದ್ಧತಿ. ಆದರೆ ಯಾರ್ಯಾರಿಗೆ, ಯಾವ ಯಾವ ಕಾರ್ಯಕ್ರಮಗಳಿಗೆ, ಎಷ್ಟೆಷ್ಟು ಮೌಲ್ಯದ ಉಡುಗೊರೆ ನೀಡುವುದು,  ಒಟ್ಟಾರೆ  ಏನು ಉಡುಗೊರೆ ಕೊಡುವುದು ಎಂಬುದು ಸಾಮಾನ್ಯವಾಗಿ ನಮಲ್ಲಿ ಉಧ್ಭವವಾಗುವ, ಅನೇಕ ಸಲ ಗೊಂದಲ ಉಂಟುಮಾಡುವ ಪ್ರಶ್ನೆ. ಹೀಗೊಂದು ಚಿಕ್ಕ ಟಿಪ್ಪಣಿ, ಉಪಯುಕ್ತ ಉಡುಗೊರೆಗಳ ಕುರಿತು. ಸಂದರ್ಭ ೧ :  ಲತಾ ಒಂದು ಟೆಲಿಫೋನ್ ಆಫೀಸ್ ನಲ್ಲಿ ಕೆಲಸ ಮಾಡುವ ಮಧ್ಯಮ ವರ್ಗದ ಮಹಿಳೆ. ಉನ್ನತ ಹುದ್ದೆಯಲ್ಲಿರುವ ಸಹೋದ್ಯೋಗಿಯ ಮಗನ ಮದುವೆಗೆ ಕರೆಯೋಲೆ ಸಿಕ್ಕಿದೆ. ಧಾಮ್ ಧೂಮ್ ಮದುವೆಯಂತೆ ಎಂಬ ಸುದ್ದಿ ಗಾಳಿಯಲ್ಲಿದೆ. ಚೆನ್ನಾಗಿ ಸಿಂಗಾರಗೊಂಡು ಹೋಗಬೇಕು, ಮದುವೆಗೆ ಉ...

ಮಕ್ಕಳ ಪರೀಕ್ಷೆ - ಪಾಲಕರ ತಯಾರಿ ಹೇಗೆ?

ಮಕ್ಕಳ ಶಿಕ್ಷಣದ ವಾರ್ಷಿಕ ಅವಧಿಯ ಕೊನೆಯ ಹಂತ, ಪರೀಕ್ಷಾ ಸಮಯ.. ಅತ್ಯಂತ ಮುಖ್ಯವಾದ ಘಟ್ಟ. ಈಗಿನ ಶಿಕ್ಷಣ ವಿಧಾನದ ಪರಿಸ್ಥಿತಿ ನೋಡಿದರೆ, ಮಕ್ಕಳಿಗೆ ಎಷ್ಟರ ಮಟ್ಟಿಗೆ ಪರೀಕ್ಷಾ ಆತಂಕವಿರುತ್ತದೋ ಅದಕ್ಕಿಂತ ದುಪ್ಪಟ್ಟು ಆತಂಕ ಪೋಷಕರಲ್ಲಿ ಇರುತ್ತದೆ. ತಮ್ಮ ಮಗು ಓದಿನಲ್ಲಿ ಮುಂಚೂಣಿಯಲ್ಲಿರಬೇಕೆಂಬ ಅಭಿಲಾಷೆ ಪ್ರತಿಯೊಬ್ಬ ಪಾಲಕನ ಒತ್ತಾಸೆಯಾಗಿರುತ್ತದೆ. ಎಲ್ಲಾ ಮಕ್ಕಳ ಬುದ್ಧಿ ಮಟ್ಟವು ಒಂದೇ ರೀತಿಯಲ್ಲಿ ಇರುವುದಿಲ್ಲವಾದ್ದರಿಂದ, ಹೆಚ್ಚಿನ ಸಿದ್ಧತೆ ಖಂಡಿತ ಅವಶ್ಯಕ. ಯುದ್ಧಕಾಲೇ ಶಸ್ತ್ರಾಭ್ಯಾಸ ಎಂಬಂತೆ ಪರೀಕ್ಷೆಯ ಕೊನೆಯ ವಾರದಲ್ಲಿ ಪುಸ್ತಕ ಹಿಡಿಯುವ ಮಕ್ಕಳಿಗೂ, ಗಾಬರಿಸಿ ಗದರಿಸಿ ಇನ್ನಷ್ಟು ಆತಂಕ ಪಟ್ಟು ಒತ್ತಡ ಹಾಕುವ ಪೋಷಕರಿಗೂ, ಇದೋ ಒಂದು ಚಿಕ್ಕ ಟಿಪ್ಪಣಿ, ಪರೀಕ್ಷೆ ಎಂಬುದಕ್ಕೆ ಮಕ್ಕಳ ಜೊತೆ ನಮ್ಮ ತಯಾರಿ, ಜವಾಬ್ದಾರಿಗಳೇನು ಎಂಬುದರ ಬಗ್ಗೆ. ೧. ಮಗುವಿನ ಶೈಕ್ಷಣಿಕ ಪ್ರಗತಿ ಬಗ್ಗೆ ಶಾಲೆಯಲ್ಲಿ ವಿಚಾರಣೆ.  ನಮ್ಮ ಮಕ್ಕಳನ್ನು ಒಳ್ಳೆಯ ಶಿಕ್ಷಣ ಕೊಡುವ ಭರವಸೆಯನ್ನೀಡುವ ಶಾಲೆಗೆ ಸೇರಿಸಿದರೆ ನಮ್ಮ ಜವಾಬ್ಧಾರಿ ಮುಗಿದೀತೇ? ಖಂಡಿತವಾಗಿಯೂ ಅಷ್ಟೇ ಸಾಲದು. ಮಕ್ಕಳ ಕಲಿಕೆಯ ಹಂತದಲ್ಲಿ ಅವರಷ್ಟೇ ನಾವು ಕೂಡ ಭಾಗಿಯಾಗಬೇಕು. ಪರೀಕ್ಷೆಗೆ ಇನ್ನೂ ಎರಡು ತಿಂಗಳಿರುವಂತೆಯೇ ಒಮ್ಮೆ ಶಾಲೆಯಲ್ಲಿ ಮಗುವಿನ ಪ್ರಗತಿಯ ಬಗ್ಗೆ ವಿಚಾರಿಸಿ, ನಮ್ಮ ಮಗುವಿಗೆ ಯಾವ ವಿಷಯ ಕಷ್ಟವಾಗುತ್ತಿದೆ, ಶಾಲೆಯಲ್ಲಿ ಕಲಿಕಾ ಸಾಮರ್ಥ್ಯ,...