ಪೋಸ್ಟ್‌ಗಳು

ಹಬ್ಬ ಹರಿದಿನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಬಾಲ್ಯದ ಯುಗಾದಿ

ಇಮೇಜ್
ನನ್ನ ವಯಸ್ಸಿನ ಆಸುಪಾಸಿನವರೇ ಮಾವನ ಮಕ್ಕಳು ಇರ್ತಿದ್ರಿಂದ  ನನ್ನ ಬಾಲ್ಯದ  ದಿನಗಳೆಲ್ಲ ಹೆಚ್ಚು ಕಳೆದದ್ದು ಅಜ್ಜನ ಮನೆಯಲ್ಲೇ. ಬೆಳಕು ಹರಿಯುವುದಕ್ಕೂ ಮುಂಚೆ ಪ್ರಾರಂಭವಾಗುತ್ತಿದ್ದ ಹಕ್ಕಿಪಿಕ್ಕಿಗಳ ಚಿಲಿಪಿಲಿ, 'ನಂಗಳನ್ನ ಮಾತಾಡ್ಸೋ' ಎಂದು ಮಾವನನ್ನು ಕೂಗಿ ಕರೆಯುತ್ತಿದ್ದ ದನಕರ್ಗಗಳ ಏರು ಧ್ವನಿಗೆ ನಾವು ಮಕ್ಕಳಿಗೂ ಕೂಡ ಎಚ್ಚರವಾಗಿ ಹೋಗುತ್ತಿತ್ತು. ೪. ೩೦ - ೫ ಗಂಟೆಗೆ ಎದ್ದುಕೊಂಡು, ಕತ್ತಲಲ್ಲಿ ಅಜ್ಜ ಅಮ್ಮುಮ್ಮ ಚುಂನೆಣ್ಣೆ ದೀಪ ಹಿಡ್ಕೊಂಡು ಅವ್ರವ್ರ ಕೆಲ್ಸ ಮಾಡ್ಕೋತ ಇದ್ರೆ, ಅರೆಗಣ್ಣು ಮಾಡಿಕೊಂಡು ಅವರ ಹಿಂಬಾಲಕರಾಗಿ ನಾವೆಲ್ಲಾ ಓಡಾಡ್ಕೊಂಡು ಇರುತ್ತಿದ್ದೆವು. ಹಿತ್ಲಕಡೆ ಒಲೆ ಉರಿಯ ಚಿಟಿ ಚಿಟಿ ಶಬ್ದ, ಅಡ್ಗೆ ಮನೆಲಿ ಅಮ್ಮುಮ್ಮ ಮಜ್ಜಿಗೆ ಕಡೆಯುವ ಶಬ್ದ, ಅತ್ತೆ ಹೆಬ್ಬಾಗಿಲ ಅಂಗಳವನ್ನು ಚರ್ ಚರ್ ಎಂದು ಕಡ್ಡಿಹಿಡಿಲಿ ಗುಡಿಸಿ ಸಗಣಿ ಹಾಕಿ ಹಾಳೆಕುಂಟಿನಿಂದ ಸಾರಿಸುವ ಶಬ್ದ, ದೇವ್ರ ಕೋಣೇಲಿ ಅಜ್ಜನ ಪೂಜೆಯ ಮಂತ್ರ,  ದನಕರುಗಳ ಕತ್ತಿನ ಗಂಟೆಗಳ ನಾದ ಇವೆಲ್ಲಾ ನನ್ನಲ್ಲಿ ಅಂತರ್ಗತವಾಗಿರುತ್ತಿದ್ದ ಅಜ್ಜನಮನೆಯ ನಿತ್ಯದ ದಿನಚರಿಯ ಶಬ್ದಗಳು. ಇವೆಲ್ಲದರ ಮಧ್ಯೆ,  "ಇವತ್ತು ತೋಲಾಗಿ ಹೂವು ಕೊಯ್ಕ್ಯ ಬನ್ನಿ ಹುಡ್ರಾ, ಹಬ್ಬ ಇವತ್ತು.. " ಎಂದೆನ್ನುವ ಅಮ್ಮಮ್ಮನ ಧ್ವನಿಗೆ ಥಟ್ ಎಂದು ಎಚ್ಚರಗೊಳ್ಳುತಿತ್ತು ಮನಸ್ಸು.   ಸಣ್ಣಾಕಿದ್ದ...

ಬತುಕಮ್ಮ ಹಬ್ಬ

ಇಮೇಜ್
ಬಿರು ಬಿಸಿಲಿನ ಊರು ಹೈದರಾಬಾದ್ ನ ನಂಟು ನನಗೆ ಪ್ರಾರಂಭವಾದ್ದು ೫ ವರ್ಷಗಳ ಹಿಂದೆ. ಅಕ್ಕ ನ ಕುಟುಂಬ ಹೈದರಾಬಾದಿನಲ್ಲಿ ವಾಸಿಸಲಾರಂಭಿಸಿದಾಗಿನಿಂದ, ವರ್ಷಕ್ಕೊಂದು ಸರ್ತಿಯಾದರೂ ರಜೆಗೆಂದು ಅಲ್ಲಿಗೆ ತೆರಳುವುದು ಸಾಮಾನ್ಯವಾಗಿದೆ ನನಗೆ. ಪ್ರತಿ ಸಲವೂ ಮಕ್ಕಳನ್ನು ಕಟ್ಟಿಕೊಂಡು ಸಿಕ್ಕ ಸಿಕ್ಕ ಸಂದರ್ಭ, ಸಿಕ್ಕ ಸಿಕ್ಕ ಸಮಯವನ್ನು ಹೈದರಾಬಾದ್ ಓಡಾಡಲು ಬಳಸಿಕೊಳ್ಳುತ್ತಿದ್ದೆವು. ಅಂತೆಯೇ ಈ ಸರ್ತಿ ಸೆಪ್ಟೆಂಬರ್ ತಿಂಗಳಿನಲ್ಲಿ ಅಲ್ಲಿಗೆ ಪ್ರಯಾಣ ಬಳಸಿದೆನಾದ್ದರಿಂದ, ಅಲ್ಲಿನ ಅತ್ಯಂತ ಸಡಗರದ ಮತ್ತು ಸ್ಥಳೀಯ ಹಬ್ಬವೊಂದರ ಪರಿಚಯ ನನಗಾಯಿತು. ಅದುವೇ, ಬತುಕಮ್ಮ ಹಬ್ಬ. ಬತುಕಮ್ಮ ಹಬ್ಬ ತೆಲಂಗಣಿಗರ ಒಂದು ವಿಶಿಷ್ಟವಾದ ಮತ್ತು ಅನನ್ಯವಾದ ನವರಾತ್ರಿ ಹಬ್ಬ. ಹಬ್ಬ ಎನ್ನುವುದಕ್ಕಿಂತಲೂ ಇದೊಂದು ಅಲ್ಲಿನ ಸಂಸ್ಕೃತಿಯ ಸ್ವರೂಪವಾಗಿದೆ. ತೆಲುಗು ಭಾಷೆಯ ಪ್ರಕಾರ, ಬತುಕು ಎಂದರೆ ಜೀವ ಮತ್ತು ಅಮ್ಮ ಎಂದರೆ ತಾಯಿ. ಜನನಿ ಎಂದು ಕರೆಯಲ್ಪಡುವ ಶಕ್ತಿ ದೇವತೆ ಮಹಾ ಗೌರಿಯನ್ನು ನಿಸರ್ಗ ದೇವತೆಯ ರೂಪದಲ್ಲಿ ಪೂಜಿಸಲ್ಪಡುವ ಆಚರಣೆ. ಮಹಾಲಯ ಅಮಾವಾಸ್ಯೆ ದಿನದಿಂದ ಪ್ರಾರಂಭವಾಗುವ ಈ ಹಬ್ಬಕ್ಕೆ, ಗೋಪುರದ ಮಾದರಿಯಲ್ಲಿ, ಬಿದಿರಿನ ಕಟ್ಟನ್ನು ನಿರ್ಮಿಸಿಕೊಂಡು ಅದರ ಸುತ್ತಲೂ ಏಳು ಹಂತಗಳಲ್ಲಿ, ಋತುಮಾನಕ್ಕೆ ತಕ್ಕಂತೆ ದೊರೆಯುವ, ಚೆಂಡು ಹೂವು, ಕನ್ನೇ  ಹೂವು, ಆವರಿಕೆ ಗಿಡದ ಹೂಗಳು ಮತ್ತಿತರ ವಿಶ...

ಭೂಮಿ ಹುಣ್ಣಿಮೆ

ಇಮೇಜ್
ಭೂಮಿ ಹುಣ್ಣಿಮೆ ಒಂದು ಅಪರೂಪದಲ್ಲಿ ಅಪರೂಪದ ಹಬ್ಬ. ಅದರಲ್ಲೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಸಿಗುವಂತಹ ಭೂಮಿ ತಾಯಿಗೆ ಸಲ್ಲಿಸುವ ಪೂಜಾ ಕ್ರಮ. 'ಸೀಗೆ ಹುಣ್ಣಿಮೆ' ಎಂತಲೂ ಕರೆಯಲ್ಪಡುವ ಈ ಹಬ್ಬದಲ್ಲಿ, ಭೂಮಿಯನ್ನು ದೇವತೆ ಎಂದೇ ಭಾವಿಸಿ ಕೃಷಿಕರೆಲ್ಲ ವರ್ಷಪೂರ್ತಿ ತಮಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡುವ ತಮ್ಮ ನೆಲಕ್ಕೆ ವರ್ಷಕ್ಕೂಮ್ಮೆ ಪೂಜೆ ಮಾಡಿ ಕೃತಜ್ಞತೆ ಸಲ್ಲಿಸುವ ಸಂಪ್ರದಾಯವಾಗಿದೆ. ಇನ್ನೂ ಕೆಲವರ ಪ್ರಕಾರ ಈ ಹಬ್ಬವು, ಭತ್ತ ಮೊಳಕೆಯೊಡೆದು ಪೈರು ಹಿಡಿಯುವ ಈ ಸಂದರ್ಭದಲ್ಲಿ ಭೂಮಿ ತಾಯಿಗೆ ಸೀಮಂತ ಮಾಡುವುದು ಎಂಬ ಪ್ರತೀತಿಯೂ ಇದೆ. ಭೂಮಿ ಹುಣ್ಣಿಮೆ ಹಬ್ಬದಂದು, ತೋಟ ಗದ್ದೆಗಳಲ್ಲಿ ಪೂಜೆಗೆ ಸೂಕ್ತವಾದ ಜಾಗವೊಂದನ್ನು  ಆಯ್ಕೆ ಮಾಡಿಕೊಂಡು ಹಿಂದಿನ ದಿನವೇ ಆ ಜಾಗವನ್ನು ಸ್ವಚ್ಛಗೊಳಿಸಿ, ಪೂಜಾ ಕಲ್ಲನ್ನು ಪ್ರತಿಷ್ಠಾಪಿಸಿ ಹಸನು ಮಾಡಿಕೊಳ್ಳುತ್ತಾರೆ. ಮರುದಿನ ಮುಂಜಾವಿನಲ್ಲೇ ಮಾವಿನ ತೋರಣ, ಬಾಳೆ ದಿಂಡು, ಕಬ್ಬು, ಹೂವು, ತೆಂಗಿನ ಸಿಂಗಾರ, ಹೂವುಗಳಿಂದ ಸಿಂಗರಿಸುತ್ತಾರೆ. ಮನೆಯ ಮಂದಿಯೆಲ್ಲ ಸೇರಿ ಪೂಜೆಗೆ ಪಾಲ್ಗೊಳ್ಳಲು ಅನುವಾಗುವಂತೆ ಬಾಳೆ ಎಲೆಗಳನ್ನು ತೋಟದಲ್ಲಿ ಹಾಸಿ ಕುಳಿತುಕೊಳ್ಳಲು ಅಣಿಮಾಡಲಾಗುತ್ತದೆ. ಪೂಜೆ, ಮಂಗಳಾರತಿ, ಬಾಗಿನ ಸಮರ್ಪಣೆ ಮತ್ತು ಹಬ್ಬದಡುಗೆಯ ನೈವೇದ್ಯ ಮಾಡಲಾಗುತ್ತದೆ. ಅದರಲ್ಲೂ ಚೀನಿಕಾಯಿ 'ಕಡುಬು', ಸಾಂಬಾರ ...