ಪೋಸ್ಟ್‌ಗಳು

ಒಂದು ದ್ವೀಪದ ಕಥೆ!!

ಇಮೇಜ್
ಮಕ್ಕಳ ಪಾರ್ಕಿನಲ್ಲಿ ಮಗಳ ಆಟದ ದಿನಚರಿ. ಅಲ್ಲೊಂದು ಪುಟ್ಟ ಮಗು ಕಲ್ಲು ಮಣ್ಣುಗಳನ್ನು ಹೆಕ್ಕಿ ತಂದು ಜೋಡಿಸಿ ತನ್ನದೇ ಆದ ಆಟವನ್ನು ಆಡುತ್ತಿತ್ತು. ಅಣತಿ ದೂರದಲ್ಲಿ ಅವರಪ್ಪ ಫೋನಿನಲ್ಲಿ ಮಾತನಾಡುತ್ತಾ ಓಡಾಡುತ್ತಿದ್ದರು. ಮಗುವಿನ ಜೋಡಣಾ ಶೈಲಿ ನನಗಿಷ್ಟವಾಗಿ ಹೋಗಿ ಮಾತನಾಡಿಸಿ ಗೆಳೆತನ ಮಾಡಿಕೊಂಡೆ. ನಾಲ್ಕು ವರ್ಷದ ಹುಡುಗ ಅವನು. ಮಾಶಾ ಅಂಡ್ ದಿ ಬೇರ್ ಕಾರ್ಟೂನ್ ನಲ್ಲಿ ಬರುವ ಸಂದರ್ಭವನ್ನು ತನ್ನ ಮನಸ್ಸಿನಲ್ಲಿಟ್ಟುಕೊಂಡು, ಕ್ಯಾಂಪ್ಫೈರ್ ಗೆ ತಯಾರಿ ನಡೆಸುತ್ತಿದ್ದ. ಸರಿ, ಅವನ ಕಲ್ಪನೆಯ ಕಥೆಗೆ ತಕ್ಕಂತೆ , ಇಬ್ಬರು ಸೇರಿ ವಸ್ತುಗಳ  ಒಟ್ಟು ಮಾಡುವುದು ಇನ್ನಿತರ ಚಟುವಟಿಕೆ ನಡೆಸುತ್ತಾ ಹೋದೆವು. ನನ್ನ ಮಗಳಿಗೋ ವ್ಯಾಯಮದ ಪಾರ್ಕಿನಲ್ಲಿ ಕಸರತ್ತು ಮಾಡುವ ಹುಚ್ಚು. ಆದರೆ ಈ ಕಡೆಗೂ ಒಲವು. ಆಗಾಗ ಬಂದು ನಮ್ಮನ್ನು ಮಾತನಾಡಿಸುತ್ತಾ, ಕಥೆಯನ್ನು ಕೇಳುತ್ತಾ, ಮಧ್ಯೆಮಧ್ಯೆ ಸಹಾಯ ಮಾಡಿ ಹೋಗುತ್ತಿದ್ದಳು. ಇದ್ದಕ್ಕಿದ್ದಂತೆ, ಯಾವುದೋ ಒಂದು ದ್ವೀಪದಲ್ಲಿದ್ದ ನಾವು ಕ್ಯಾಂಪ್ ಫೈರ್ ತಯಾರಿ ನಡೆಸುತ್ತಿದ್ದವರು, ಹಾಸ್ಪಿಟಲ್ ಗೆ ಹೋಗುವ ಕಥೆಯ ಮೂಲಕ, ನಮ್ಮೆಲ್ಲ ಜೋಡಣೆಯನ್ನು ಆ ಹುಡುಗ ಬದಲಾಯಿಸುತ್ತಾ ಬಂದ. ಯಾವುದಕ್ಕೂ ಒಪ್ಪದಾದ. ನನಗೋ ಆ ಕಾರ್ಟೂನ್ ನ ಹಿಂದೆ ಮುಂದೆ ತಿಳಿಯದು. ನಾನು ಜೋಡಿಸಿಟ್ಟಿದ್ದನ್ನೆಲ್ಲ ಆತ ಮುರಿಯುತ್ತಿದ್ದ. ನಾನು ಕಷ್ಟಪಡುತ್ತಿದ್ದುದ್ದನ್ನು ಕಂಡು ಮಗಳು ಓಡಿಬಂದಳು. ಆಸ್ಪತ್ರೆಯ ಕಥೆ ಮಾಷಾ ಅಂಡ್ ದ ಬೇರ...

ಸೂರ್ಯನಿಗೊಂದು ದೇವಾಲಯ!!

ಇಮೇಜ್
ನಮಗೆಲ್ಲ ಬೆಳೆಗೆದ್ದ ಕೂಡಲೇ ಮನೆಯ ಬಾಗಿಲ ಮುಂದೆ ಹೋಗಿ ಸೂರ್ಯನ ಕಂಡು ನಮಸ್ಕರಿಸಿ ಬರಲು ಚಿಕ್ಕಂದಿನಲ್ಲಿ ಹೇಳಿಕೊಡುತ್ತಿದ್ದರು. ಅದೆಷ್ಟೋ ಸುಂದರ ಸೂರ್ಯೋದಯ, ಸೂರ್ಯಾಸ್ತಗಳನ್ನು ಕಂಡು ಕೊಂಡಾಡಿಯಾಗಿದೆ ಇನ್ನು ಸೂರ್ಯ ನಮಸ್ಕಾರ ಆಸನಗಳ ಅಭ್ಯಾಸ ಇವೆಲ್ಲವೂ ಸಾಮಾನ್ಯ ಬಳಕೆಯಲ್ಲಿದ್ದರೂ, ಸೂರ್ಯನಿಗಾಗಿಯೇ ಬ್ರಹತ್ ದೇವಾಲಯವನ್ನು ಕಾಣುವಾಗ ಮಾತ್ರ ರೋಮಾಂಚವಾದ್ದು ಸುಳ್ಳಲ್ಲ. ಹೀಗೊಂದು ಸೂರ್ಯನ ದೇವಾಲಯಕ್ಕೆ ಭೇಟಿಯ ಅವಕಾಶ ಸಿಕ್ಕಿದ್ದು ನಮಗೆ ನಮ್ಮ ಒಡಿಶಾ ಪ್ರವಾಸದಲ್ಲಿ.. ಕೊನಾರ್ಕ್ ಸೂರ್ಯ ದೇವಾಲಯವಿರುವುದು, ಭಾರತದ ಪೂರ್ವ ಕರಾವಳಿ ಒಡಿಸ್ಸಾದ ಪುರಿಯಲ್ಲಿ.  ಇದು ಯುನೆಸ್ಕೋ ದ ವಿಶ್ವ ಪರಂಪರೆಯಲ್ಲಿ ಪಟ್ಟಿ ಮಾಡಿರುವ ಸುಂದರ ಸಂರಕ್ಷಿತ ತಾಣಗಳಲ್ಲಿ ಒಂದಾಗಿದ್ದು,ಇದು  ತನ್ನ ಸೊಗಸಾದ ಕಳಿಂಗ ವಾಸ್ತು ಶಿಲ್ಪ ಮತ್ತು ಕೆತ್ತನೆಗಳಿಗೆ ಪ್ರಖ್ಯಾತವಾಗಿದೆ. ಸೂರ್ಯನು ಶಕ್ತಿಯ ಸ್ವರೂಪ. ಭಾರತದಲ್ಲಿರುವ ಸೂರ್ಯದೇವನಿಗೆ ಸಮರ್ಪಿತ ಮೂರು ದೇವಾಲಯಗಳ ಪೈಕಿ ಇದು ಒಂದು. ಗುಜರಾತ್ನ ಮೊಧೇರಾ ಸೂರ್ಯ ದೇವಾಲಯ ಮತ್ತು ಕಾಶ್ಮೀರದ ಮಾರ್ಥಾಂಡ ದೇವಾಲಯವು ಕೂಡ ಇದರಷ್ಟೇ ಜನಪ್ರಿಯವಾಗಿದೆ. 12ನೇ ಶತಮಾನದಲ್ಲಿ ನರಸಿಂಹ ದೇವನಿಂದ ಕಟ್ಟಿಸ ಕಟ್ಟಿಸಲ್ಪಟ್ಟ ಈ ದೇವಾಲಯ, ಸಮುದ್ರದ ತುದಿಯಲ್ಲಿದ್ದು ಶಿಥಿಲಗೊಂಡಿದ್ದರೂ ಕೂಡ 2,000 ಕ್ಕೂ ಹೆಚ್ಚು ವರ್ಷಗಳಿಂದ ಸ್ಥಿರವಾಗಿ ನಿಂತಿದೆ. ಭಾರತದ ವಿಶಿಷ್ಟ ದೇವಾಲಯಗಳಲ್ಲಿ ಒಂದಾದ ಈ ದೇವಾಲಯ ವಾಸ್ತವವಾಗಿ ಹೇಳಬೇಕೆಂ...

'ಮದುವೆಯ ಮನೆ' - ಓಡಿಶಾದ ಮನೆ ಮನೆಗಳಲ್ಲೂ ಚಿತ್ರಕಲೆ

ಇಮೇಜ್
ಓಡಿಸಾ ಪ್ರವಾಸದ ಸಂದರ್ಭದಲ್ಲಿ ನಾವು ಜನರ ಇನ್ನೊಂದು ವಿಶಿಷ್ಟ ಸಂಪ್ರದಾಯ ವನ್ನು ಗಮನಿಸಿದವು. ನಮ್ಮ ಮಲೆನಾಡ ಕಡೆ ಹಸಿ ಚಿತ್ತಾರವಿದ್ದಂತೆ, ಮಹಾರಾಷ್ಟ್ರದ ವರ್ಲಿ ಚಿತ್ರಕಲೆ, ಬಿಹಾರದ ಮಧುಬನಿ ಇದ್ದಂತೆ, ಶುಭ ಸಾಂಕೇತಿಕ ವಸ್ತುಗಳ ಚಿತ್ರಕಲೆಯ ಪರಂಪರೆ ಮದುವೆ ಸಾಂಪ್ರದಾಯಿಕ ಪರಂಪರೆಯೊಂದಿಗೆ ಬೆಸೆದುಕೊಂಡಿದೆ. ಯಾರ ಮನೆಯಲ್ಲಿ ಮದುವೆಯ ಆಚರಣೆ ಇರುತ್ತದೆಯೋ, ಅವರ ಮನೆಯ ಹೊರಗಿನ ಗೋಡೆಯ ಮೇಲೆ, ಕಳಶದ ಮೇಲಿರುವ ತೆಂಗಿನ ಕಾಯಿ, ಬಾಳೆ ಮರ, ಮೀನು, ವಾದ್ಯಗಳು ಇತ್ಯಾದಿ ನಿಸರ್ಗ ಆರಾಧನೆಯ ಫಲವಂತಿಕೆಯ ಸಾಂಕೇತಿಕ ವಸ್ತುಗಳ ಪೈಂಟಿಂಗ್ ಮಾಡಿಸುತ್ತಾರೆ. ಸಮೃದ್ಧಿ ಮತ್ತು ಶುಭವನ್ನು ಸೂಚಿಸುವ, ಈ ರೀತಿಯ ಪೇಂಟಿಂಗಳನ್ನು, ನೋಡಲು ನಿಜವಾಗಿಯೂ ಖುಷಿಯಾಗುತ್ತಿತ್ತು. ವಧು ವರರ ಹೆಸರುಗಳನ್ನು ಸೂಚಿಸಿ ಮದುವೆಯ ಮಾಹಿತಿಯನ್ನು ನೀಡಲು ಕೂಡ ಈ ರೀತಿಯ ಸಂಪ್ರದಾಯ ಬೆಳೆದು ಬಂದಿರಬಹುದು. ಪ್ರದೇಶದಿಂದ ಪ್ರದೇಶಕ್ಕೆ ಆಚರಣೆಗಳು ಬದಲಾದರೂ, ಮನುಷ್ಯನ ಖುಷಿ ಮತ್ತು ಸಂಭ್ರಮಾಚರಣೆಗೆ, ಚಿತ್ರಕಲೆ, ಹಾಡು-ನೃತ್ಯ ಇನ್ನಿತರ ಕಲೆಗಳ ಮುಖೇನ ನಡೆಸಿಕೊಂಡು ಹೋಗುವ ಇಂತಹ ಪುಟ್ಟ ಪುಟ್ಟ ಸಂಪ್ರದಾಯಗಳು, ಆ ಪ್ರದೇಶದ ಸಂಸ್ಕೃತಿಯ ಉಳಿವಿಗೆ ಸಹಾಯಕ ಅಂಶಗಳಾಗಿರುತ್ತವೆ.  #marriagepainting #artandculture #odisha

Odisha - Land of Art

ಇಮೇಜ್
ನಮ್ಮ ಓಡಿಶಾ ಪ್ರವಾಸದಲ್ಲಿ, ನಾವು ಮೊದಲು ಮೆಟ್ಟಿದ ನಗರ ರಾಜಧಾನಿ ಭುವನೇಶ್ವರ. ಸುಮಾರು  400+ sq. Km ಇರುವ ಈ ನಗರದಲ್ಲಿ, ಏರ್ಪೋರ್ಟ್ನಿಂದ ಹೊರಟು ಹೋಟೆಲ್ ತಲುಪುವವರೆಗೂ ಕಣ್ಣಾಡಿಸಿದ ಜಾಗದಲ್ಲೆಲ್ಲಾ ನಮ್ಮನ್ನು ಆಕರ್ಷಿಸಿದ ಎರಡು ಮುಖ್ಯ ವಸ್ತು ವಿಷಯಗಳು ಒಂದು ನಗರದ ಅದ್ಭುತ ಸ್ವಚ್ಛತೆ ಮತ್ತೊಂದು, ರಸ್ತೆಯ ಬದಿಯ ಗೋಡೆಗಳಿಂದ ಹಿಡಿದು, ರಸ್ತೆಯ ಬದಿಯ ಮನೆಗಳ ಗೋಡೆಗಳು ಸೇರಿದಂತೆ ಎಲ್ಲವೂ ಕೂಡ ಚಿತ್ರಕಲೆಗಳಿಂದ ಸಿಂಗರಿಸಿ ಹೋಗಿತ್ತು, ಇಡೀ ಊರಿಗೆ ಊರಿನ ಗೋಡೆಗಳೆಲ್ಲವೂ ಪೇಂಟಿಂಗ್ ಕ್ಯಾನ್ವಾಸ್ಗಳೇ!! ಕಣ್ಣು ಹಾಯಿಸಿದಲ್ಲೆಲ್ಲ ರಸ್ತೆಯ ಬದಿ ಕಾಂಪೌಂಡಿನ ಮೇಲೆಲ್ಲಾ, ಒಡಿಸ್ಸಾದ ಇತಿಹಾಸ, ನೃತ್ಯ, ಜಾನಪದ ಕಲೆ, ಸಂಸ್ಕೃತಿ-ಸಾಹಿತ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಕುರಿತಾದ, ಒಂದಕ್ಕಿಂತ ಒಂದು ಚೆಂದದ ಪೇಂಟಿಂಗ್ಗಳು!! ಪೌರಾಣಿಕ ನಿರೂಪಣೆ ಮತ್ತು ಜಾನಪದ ಕಥೆಗಳನ್ನು ಚಿತ್ರಗಳ ಮೂಲಕ ಪ್ರತಿಬಿಂಬಿಸುವ ಪಟ್ಟ ಚಿತ್ರಗಳ ಡಿಸೈನ್ಗಳು ನೋಡಿದಲ್ಲೆಲ್ಲ ಮನಸ್ಸಿಗೆ ಮುದವನ್ನು ನೀಡುವಂತಿದೆ. ಶಾಲಾ ಕಾಲೇಜುಗಳು, ಪೋಸ್ಟ್ ಆಫೀಸ್, ಪೊಲೀಸ್ ಠಾಣೆ, ಆಸ್ಪತ್ರೆ, ಫ್ಲೈ ಓವರ್, ಟ್ರಾಫಿಕ್ ಜಂಕ್ಷನ್ಗಳು ಇತ್ಯಾದಿ ಕಟ್ಟಡಗಳ ಜೊತೆಗೆ ಇನ್ನಿತರ ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಮೇಲೆ ಅವುಗಳ ಕಾರ್ಯನಿರ್ವಹಣೆಯ ಕುರಿತಾದ ವಿಷಯಗಳ ಪೇಂಟಿಂಗ್ಗಳು ಎಲ್ಲೆಡೆ ಕಾಣಸಿಗುತ್ತಿದ್ದವು. ಇಲ್ಲಿನ ದೇವಾಲಯಗಳು ಮತ್ತು ದೈವಿಕತೆಗೆ ಸಂಬಂಧಪಟ್ಟಂತಹ ಚಿತ್ರಗಳು, ಜಾನಪದ ...

ಚೌಸಟ್ ಯೋಗಿನಿ ದೇವಾಲಯ

ಇಮೇಜ್
ಭುವನೇಶ್ವರದ ನಗರದೊಳಗಿನ ಪ್ರಮುಖ ದೇವಾಲಯಗಳನ್ನೆಲ್ಲ ಮುಗಿಸಿ, ಮತ್ತಿನ್ಯಾವ ವಿಶಿಷ್ಟ ಸ್ಥಳವನ್ನು ನೋಡಬಹುದು ಎಂದು ಹುಡುಕಿದಾಗ ಗೂಗಲಮ್ಮ ಹೇಳಿದ್ದು, ಚೌಸ ಯೋಗಿನಿ ದೇವಾಲಯದ ಬಗ್ಗೆ. ಬೇರೆ ದೇವಾಲಯಗಳಷ್ಟು ಪ್ರಸಿದ್ಧ ಮಾಹಿತಿಗಳು ಇರದಿದ್ದರೂ, ಯೋಗಿನಿ ದೇವಾಲಯ ಭೇಟಿ ನೀಡಲೇ ಬೇಕು ಎಂದುಕೊಂಡು ಹೋಟೆಲ್ಲಿನಿಂದ ಆಕ್ಷಣಕ್ಕೆ ಕಾಲ್ಕಿತ್ತೆವು. ಗೂಗಲ್ ಮ್ಯಾಪ್ ಪ್ರಕಾರ ಪಟ್ಟಣದಿಂದ ಸುಮಾರು ೧೫ ಕಿಮೀ ಹೊರಭಾಗದಲ್ಲಿ ಇತ್ತು ಈ ದೇವಾಲಯ. ಹಾದಿ ಸಾಗುತ್ತ ಹೋದಂತೆ, ಮುಂದಕ್ಕೆ ಯಾರೂ ಹೆಚ್ಚು ಓಡಾಡದ ಹಳ್ಳಿಯ ರಸ್ತೆಗಳಲ್ಲಿ ನಮ್ಮ ಗಾಡಿಚಲಿಸುತ್ತಿತ್ತು. ಭೈರವಿ ನದಿಯ ಪಕ್ಕದಲ್ಲಿ ಹಾದುಹೋಗುವ ಈ ಹಾದಿಯಲ್ಲಿ ಎಡ ಬಲಗಳ ತಿರುಗಾಟವಾಗಿ, ಸ್ವಲ್ಪ ಸಮಯಕ್ಕೆ  ಗೂಗಲ್ ಮ್ಯಾಪ್ ಕೂಡ ಹಾದಿ ತೋರಿಸುತ್ತಿಲ್ಲ ಎಂದಾಗ ಹೇಗೆ ತಲುಪುವುದಪ್ಪಾ ಎಂದು ತುಸು ಆತಂಕವಾದರೂ, ಯಾರನ್ನಾದರೂ ಕೇಳುತ್ತಲೇ ಸಾಗುವುದು ಎಂದು ನಿರ್ಧರಿಸಿ ಮುಂದೆ ಸಾಗಿದೆವು. ತುಸು ಹೊತ್ತಿಗೆ ಮತ್ತೆ ಗೂಗಲ್ ಮ್ಯಾಪ್ಸ್ ಮಾಹಿತಿ ನೀಡಿ ಸಹಕರಿಸಿತು.  ಅದೊಂದು ಪುಟ್ಟ ಹಳ್ಳಿ ಹಿರಾಪುರ. ಊರ ಮನೆಗಳ ಮುಂದೆ ಹಾದು ಹೋಗುವ ಸಣ್ಣ ರಸ್ತೆಗಳ ದಾಟಿದಂತೆ ಮುಂದೆ ಅನಾವರಣ ಗೊಂಡಿದ್ದು ಒಂದು ಪುರಾತನ ಸಣ್ಣ ದೇವಾಲಯದ ವರಾಂಗಣ. ದೂರದಿಂದ ಕಲ್ಲಿನ ಸಣ್ಣ ವರ್ತುಲದಂತೆ ಕಾಣುತ್ತಿದ್ದ ಕಲ್ಲಿನ ಸ್ಮಾರಕದಲ್ಲಿ ಅಂತಹದ್ದೇನಿರಬಹುದು ಎಂದುಕೊಂಡು ಹೋದವಳಿಗೆ, ಹೊರಬರುವಾಗ ಇಂತದ್ದೊಂದು ಸ್ಥಳವನ್ನು ನೋಡದೇ...

ನಮ್ಮ ಆಹಾರವೇ ನಮಗೆ ಔಷಧಿ

ಇಮೇಜ್
ಮೇಲಿಂದ ಮೇಲೆ ಬರುವ ಸಾಂಕ್ರಾಮಿಕ ರೋಗಗಳು , ಹೃದಯ ಸಂಬಂಧೀ ಕಾಯಿಲೆಗಳ ಅನುಭವ ಪಡೆದ ಮೇಲೆ, ಸಾವು ನೋವುಗಳ ಸುದ್ದಿಗಳ ಕೇಳಿದ ಮೇಲೆ, "ಆರೋಗ್ಯವೇ ಭಾಗ್ಯ" ಎಂಬ ಮಾತು ಸತ್ಯ ಎಂಬುದು ಅರಿವಾಗಿದೆ. ಆದರೇನು ಮಾಡುವುದು? ಇಂದಿನ ಯಾಂತ್ರಿಕ ಯುಗದಲ್ಲಿ ಕೈಯಳತೆಯಲ್ಲಿ ಬೇಕಾಗಿದ್ದೆಲ್ಲ ಸಿಗುವ ಮಾರಾಟ ಸೌಲಭ್ಯ, ಹೆಚ್ಚಾದ ಮನುಷ್ಯನ ಆಸೆಗಳು, ಮೆಚ್ಚುಗೆಯಾದ ಕಷ್ಟಪಡದ ಬದುಕು ಇತ್ಯಾದಿ ಅಂಶಗಳಿಂದ, ಆಹಾರ ಸಾಮಗ್ರಿಗಳು ಸ್ಥಳೀಯತೆ ಕಳೆದುಕೊಂಡು, ಹೆಚ್ಚೆಚ್ಚು ರೆಡಿ ಟು ಈಟ್, ಪ್ಯಾಕಡ್ ಫುಡ್ಸುಗಳು ನಮ್ಮ ಬದುಕಿನಲ್ಲಿ ಹಾಸುಹೊಕ್ಕಿ ಹೋಗಿವೆ. ಮನೆಯ ಮೆಟ್ಟಿಲಿಳಿ್ದರೆ ಹೊರಗಿನ ತಿಂಡಿ ಕಣ್ಣು ಕುಕ್ಕುತ್ತದೆ.  ಆ ಮೋಹದಿಂದ ಹೊರಬರುವುದು ಹೇಗೆ? ಅದಕ್ಕೆ ಒಂದೇ ಪರಿಹಾರ. ನಾವು ಮನೆಯಲ್ಲಿ ತಿನ್ನುವ ಆಹಾರವನ್ನು ಅರಿತುಕೊಳ್ಳುವುದು. ಜಗತ್ತಿನಲ್ಲಿ ಒಬ್ಬರಂತೆ ಇನ್ನೊಬ್ಬರಿರುವುದಿಲ್ಲ. ಪ್ರತಿಯೊಬ್ಬರ ದೇಹ ಪ್ರಕೃತಿಯೂ ವಿಭಿನ್ನ. ನಮ್ಮ ದೇಹಕ್ಕೆ ಯಾವುದು ಹಿತ ಅಹಿತ ಎಂಬುದು ನಾವೇ ಅಧ್ಯಯನ ಮಾಡಿಕೊಳ್ಳಬೇಕು. ಆಹಾರ ಎಂದರೆ ಕೇವಲ ಹೊಟ್ಟೆ ತುಂಬಿಸುವುದು ಎಂದರ್ಥವಲ್ಲ. ದೇಹವನ್ನು ರೋಗಮುಕ್ತವನ್ನಾಗಿಸಿ, ಸ್ವಾಸ್ಥತೆಯಿಂದ ಇಡಲು ಬೇಕಾದ ಪೋಷಕಾಂಶಗಳನ್ನು ನೀಡುವುದೇ ಆಹಾರ. ಹಾಗಾಗಿ ಎಷ್ಟು ಪ್ರಮಾಣದ ಆಹಾರ, ಯಾವ ಬಗೆಯ ಆಹಾರ, ಯಾವ ಕ್ರಮದಲ್ಲಿ, ಯಾವಾಗ ತೆಗೆದುಕೊಳ್ಳಬೇಕು ಎಂಬ ವಿಷಯಗಳೂ ಇಲ್ಲಿ ಮುಖ್ಯ.  ಆಹಾರವನ್ನು ಔಷಧಿಯೇ ಎಂದುಕೊಂಡು ಬಳಸಿದರೆ, ಮುಂದೆ...

ರಂಗೋಲಿಯೊಂದು ಧ್ಯಾನ!

ಇಮೇಜ್
ಮುಂಜಾನೆ  ವಾಕಿಂಗ್ ಹೋಗುವಾಗ ಹೆಂಗಳೆಯರು ಬಾಗಿಲ ಹೊರಗೆ, ಅಂಗಳಕ್ಕೆ ರಂಗೋಲಿ ಹಾಕುವ ದೃಶ್ಯ ಸರ್ವೇ ಸಾಮಾನ್ಯ.  ಅದರಲ್ಲೂ ಈಗ ಹಬ್ಬದ ಸೀಸನ್. ಬಗೆಬಗೆಯ ಸುಂದರ, ಬಣ್ಣ ಬಣ್ಣದ ದೊಡ್ಡ ರಂಗೋಲಿಗಳು ಮನಸ್ಸನು ಮುದಗೊಳಿಸುತ್ತದೆ. ಮನೆ ಮುಂದೆ ರಂಗೋಲಿ ಹಾಕುವುದು ಭಾರತೀಯರ ಬಹಳ ಹಳೆಯ ಸಂಪ್ರದಾಯ. ಒಂದು ಆಚರಣೆಯಾಗಿ ಇದನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆಯಾದರೂ ಇದರ ಹಿಂದಿರುವ ವೈಜ್ಞಾನಿಕ ಕಾರಣ ಅನೇಕರಿಗೆ ತಿಳಿದಿಲ್ಲ.ರಂಗೋಲಿ ಕಂಡಾಗ ಮನಸ್ಸು ಅರಳುವುದೇಕೆ? ರಂಗೋಲಿ ಹಾಕುವುದರಿಂದ ನಮಗೆ ಏನಾದರೂ ಲಾಭ ಇದೆಯಾ? ಓದೋಣ ಬನ್ನಿ. ಈ ರಂಗೋಲಿ ಹಾಕುವುದು ಎನ್ನುವುದು ಮನೆಮನೆಗಳಲ್ಲಿ ಹಿಂದಿನ ಕಾಲದಿಂದಲೂ ಪಾಲಿಸಿಕೊಂಡು ಬರಲಾಗುತ್ತಿರುವ ಒಂದು ನಿತ್ಯ ಸಂಪ್ರದಾಯ. ಈಗೀಗ ಸಮಯವಿಲ್ಲದ ಬದುಕಿಗೆ, ಆಧುನಿಕತೆಗೆ, ರಂಗೋಲಿ ಹಾಕುವ ಗೋಜಿಗೆ ಹೋಗದೆ, ರಂಗೋಲಿ ಸ್ಟಿಕ್ಕರ್ಗಳನ್ನು ಬಾಗಿಲ ಹೊರಗೆ ಅಂಟಿಸುವ ಪರ್ಯಾಯ ಮಾರ್ಗವನ್ನೂ ನಾವು ಪಡೆದಿದ್ದೇವೆ. ಆದರೂ, ಯಾವುದೇ ಧಾರ್ಮಿಕ ಆಚರಣೆ ಇರಲಿ, ಹಬ್ಬ ಹರಿದಿನಗಳು ಇರಲಿ ಅವೆಲ್ಲ ದೇವರನ್ನು ಆದರಿಸುವ ತತ್ವಕ್ಕೆ ಸಂಬಂಧಿಸಿರುವುದರಿಂದ, ಕೈಯಾರೆ ರಂಗೋಲಿ ಹಾಕುವುದು ಶುಭದ ಸಂಕೇತವೆಂದು,  ಕಾರ್ಯಕ್ರಮದ ಸೌಂದರ್ಯದ ಅವಶ್ಯಕತೆಯೆಂದು ಪರಿಗಣಿಸಲಾಗುತ್ತದೆ.  ರಂಗೋಲಿಯೊಂದು ಧ್ಯಾನ! ಸಂಸ್ಕೃತ ಪದ' ರಂಗವಲ್ಲಿ'ಯಿಂದ ರೂಪಾಂತರಗೊಂಡಿರುವ ರಂಗೋಲಿ ಪ್ರಾಚೀನ ಭಾರತೀಯ ಕಲೆ, ಶಿಲ್ಪಕಲೆ ಹಾಗ...